National news updates
ಅಸ್ಸಾಂನ ಬೋಡೋ ಪ್ರದೇಶದ ಶಾಲೆಗಳಲ್ಲಿ 'ಸಂತೋಷ'ವಾಗಲಿದೆ ಪಠ್ಯಕ್ರಮ
ಬೋಡೋಲ್ಯಾಂಡ್ ಟೆರಿಟೋರಿಯಲ್ ಕೌನ್ಸಿಲ್(ಬಿಟಿಸಿ) ದಶಕಗಳ ಕಾಲ ನಡೆದ ಕಲಹ ಮತ್ತು ಘರ್ಷಣೆಯ ಗಾಯಗಳನ್ನು ಗುಣಪಡಿಸಲು ಹೊಸ ಆಲೋಚನೆ ಮಾಡಿದೆ. ಗುವಾಹಟಿ: ಬೋಡೋಲ್ಯಾಂಡ್ ಟೆರಿಟೋರಿಯಲ್ ಕೌನ್ಸಿಲ್(ಬಿಟಿಸಿ) ದಶಕಗಳ ಕಾಲ ನಡೆದ ಕಲಹ ಮತ್ತು ಘರ್ಷಣೆಯ ಗಾಯಗಳನ್ನು ಗುಣಪಡಿಸಲು ಹೊಸ ಆಲೋಚನೆ ಮಾಡಿದೆ.
ಬೋಡೋಲ್ಯಾಂಡ್ ಪ್ರಾದೇಶಿಕ ಪ್ರದೇಶ(ಬಿಟಿಆರ್)ದಲ್ಲಿ ಸಂಪೂರ್ಣ ಶಾಂತಿ ಮರುಸ್ಥಾಪಿಸುವುದನ್ನು ಗಮನದಲ್ಲಿಟ್ಟುಕೊಂಡು ವಿದ್ಯಾರ್ಥಿಗಳಿಗೆ "ಹ್ಯಾಪಿನೆಸ್ ಮಿಷನ್" ಅಡಿಯಲ್ಲಿ ಪಠ್ಯಕ್ರಮದಲ್ಲಿ ಶಾಂತಿ ಮತ್ತು ಸಂತೋಷದ ವಿಷಯವನ್ನು ಅಳವಡಿಸಲು ನಿರ್ಧರಿಸಿದೆ.
ಬಿಟಿಸಿಯು ಅಸ್ಸಾಂನ ನಾಲ್ಕು ಜಿಲ್ಲೆಗಳಾದ ಕೊಕ್ರಜಾರ್, ಚಿರಾಂಗ್, ಬಕ್ಸಾ ಮತ್ತು ಉದಲ್ಗುರಿಯನ್ನು ನಿರ್ವಹಿಸುತ್ತದೆ.
ಇದನ್ನು ಓದಿ: ಬೆಳಗಾವಿ: ಕರ್ನಾಟಕದಲ್ಲಿ ಮದರಸಾಗಳ ಅಗತ್ಯವಿಲ್ಲ, ಎಲ್ಲವನ್ನೂ ಮುಚ್ಚುತ್ತೇವೆ; ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ
ಗುರುವಾರ ತಮುಲ್ಪುರದಲ್ಲಿ ನಡೆಯುತ್ತಿರುವ 4ನೇ ಏಷ್ಯನ್ ಖೋ ಖೋ ಚಾಂಪಿಯನ್ಶಿಪ್ನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಬಿಟಿಸಿ ಮುಖ್ಯಸ್ಥ ಪ್ರಮೋದ್ ಬೋಡೊ, ಹ್ಯಾಪಿನೆಸ್ ಮಿಷನ್, ಗುಣಪಡಿಸುವುದು, ಆಲಿಸುವುದು ಮತ್ತು ಚರ್ಚೆಗಳಿಗೆ ಒತ್ತು ನೀಡುತ್ತದೆ ಎಂದಿದ್ದಾರೆ.
ಬೋಡೋಲ್ಯಾಂಡ್ ವಿಶ್ವವಿದ್ಯಾಲಯದ ಜ್ಞಾನ ಕೇಂದ್ರದಲ್ಲಿ ಶಾಂತಿ ಮತ್ತು ಸಂತೋಷದ ವಿಷಯವನ್ನು ಸೇರಿಸುವುದರೊಂದಿಗೆ ಏಪ್ರಿಲ್ನಲ್ಲಿ ಹ್ಯಾಪಿನೆಸ್ ಮಿಷನ್ ಅನ್ನು ಪ್ರಾರಂಭಿಸಲಾಗುವುದು. ಇತ್ತೀಚೆಗೆ ನಡೆದ ಬೋಡೋಲ್ಯಾಂಡ್ ಅಂತರಾಷ್ಟ್ರೀಯ ಜ್ಞಾನೋತ್ಸವದಲ್ಲಿ ಈ ಕುರಿತು ಘೋಷಣೆ ಮಾಡಲಾಗಿದೆ ಎಂದರು.
"ಸಂತೋಷವು ಜೀವನದಲ್ಲಿ ಅತ್ಯಂತ ಪ್ರಮುಖವಾಗಿದೆ. ಆದರೆ ದೇಶದಲ್ಲಿ ಎಲ್ಲಿಯೂ ಇದನ್ನು ಕಲಿಸದಿರುವುದು ನನಗೆ ಆಶ್ಚರ್ಯ ತಂದಿದೆ. ನಾವು ಹ್ಯಾಪಿನೆಸ್ ಮಿಷನ್ನಲ್ಲಿ ಸರ್ಕಾರದ ಆಡಳಿತ ಯಂತ್ರಗಳ ಜೊತೆಗೆ ಮಾಜಿ ದಂಗೆಕೋರರು ಸೇರಿದಂತೆ ಸಮಾಜದ ಪ್ರತಿಯೊಂದು ವಿಭಾಗವನ್ನು ಒಳಗೊಳ್ಳುತ್ತೇವೆ ಎಂದು ಬೋಡೊ ಹೇಳಿದರು.
ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೂ ಶಾಂತಿ-ಸಂತೋಷದ ವಿಷಯ ಬೋಧಿಸಲಾಗುವುದು ಎಂದರು.
ವಾರಣಾಸಿಗೆ 1,780 ಕೋಟಿ ರೂ. ಉಡುಗೊರೆ ನೀಡಿದ ಪ್ರಧಾನಿ ಮೋದಿ: 28 ಅಭಿವೃದ್ಧಿ ಯೋಜನೆಗಳ ಉದ್ಘಾಟನೆ!
ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ತಮ್ಮ ಲೋಕಸಭಾ ಕ್ಷೇತ್ರ ವಾರಾಣಸಿಯ ಜನರಿಗೆ 1780 ಕೋಟಿ ಉಡುಗೊರೆ ನೀಡಿದ್ದು ಪ್ರಧಾನಿ ಮೋದಿ ಇಲ್ಲಿ 28 ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ್ದಾರೆ. ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ತಮ್ಮ ಲೋಕಸಭಾ ಕ್ಷೇತ್ರ ವಾರಾಣಸಿಯ ಜನರಿಗೆ 1780 ಕೋಟಿ ಉಡುಗೊರೆ ನೀಡಿದ್ದು ಪ್ರಧಾನಿ ಮೋದಿ ಇಲ್ಲಿ 28 ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಮಾತನಾಡಿ, ಕಾಶಿಯ ಅಭಿವೃದ್ಧಿ ಕುರಿತು ದೇಶ ಮತ್ತು ವಿಶ್ವದಲ್ಲಿ ಚರ್ಚೆಯಾಗುತ್ತಿದೆ. ಇಲ್ಲಿಗೆ ಹೋಗುವವರು ಹೊಸ ಶಕ್ತಿಯಿಂದ ಹೋಗುತ್ತಿದ್ದಾರೆ. 8-9 ವರ್ಷಗಳ ಹಿಂದೆ, ಕಾಶಿಯ ಜನರು ತಮ್ಮ ನಗರವನ್ನು ಪುನರುಜ್ಜೀವನಗೊಳಿಸುವ ಪ್ರತಿಜ್ಞೆಯನ್ನು ತೆಗೆದುಕೊಂಡಾಗ, ಬನಾರಸ್ನಲ್ಲಿ ಬದಲಾವಣೆ ಆಗುವುದಿಲ್ಲ, ಕಾಶಿಯ ಜನರು ಯಶಸ್ವಿಯಾಗುವುದಿಲ್ಲ ಎಂಬ ಆತಂಕದಲ್ಲಿ ಅನೇಕ ಜನರಿದ್ದರು. ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾತನಾಡಿ, ಪ್ರಧಾನಿಯವರು ಕಾಶಿಗೆ ಬಂದಾಗಲೆಲ್ಲ ಕಾಶಿಗೆ ಹೊಸ ಉಡುಗೊರೆ ತರುತ್ತಾರೆ. ಇಂದು ಪ್ರಧಾನಿಯವರು 1,780 ಕೋಟಿ ವೆಚ್ಚದ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ. ಹೊಸ ಕಾಶಿ ಭವ್ಯವಾಗಿದೆ ಎಂದರು. ಇದನ್ನೂ ಓದಿ: ಶೂರ್ಪನಖಿ ಎಂದಿದ್ದ ಪ್ರಧಾನಿ ಮೋದಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ ಎಂದ ಕಾಂಗ್ರೆಸ್ ನಾಯಕಿ ಈ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಗುರಿಯಾಗಿಸಿಕೊಂಡು, ಪ್ರಧಾನಿಯವರ ದೂರದೃಷ್ಟಿಯ ಅಡಿಯಲ್ಲಿ ಭಾರತವು ಜಿ 20 ಅನ್ನು ಆಯೋಜಿಸುತ್ತಿದೆ. ಆದರೆ ಕೆಲವು ಕಾಂಗ್ರೆಸ್ ನಾಯಕರು ದೇಶ ವಿದೇಶಗಳಲ್ಲಿ ಮಾನಹಾನಿ ಮಾಡುತ್ತಿದ್ದಾರೆ ಮತ್ತು ಪ್ರಜಾಪ್ರಭುತ್ವದ ಮೇಲೆ ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ. ಅವರು ಎಂದಿಗೂ ದೇಶದ ಅಭಿವೃದ್ಧಿಗೆ ಏನನ್ನೂ ಮಾಡಲಿಲ್ಲ, ಆದರೆ ಯಾವಾಗಲೂ ಭಾರತದ ಮಾನಹಾನಿ ಮಾಡುತ್ತಲೇ ಇದ್ದರು ಎಂದರು. ಇದಕ್ಕೂ ಮುನ್ನ, ವಿಶ್ವ ಕ್ಷಯರೋಗ (ಟಿಬಿ) ದಿನವಾದ ಇಂದು ವಾರಣಾಸಿಯ ರುದ್ರಾಕ್ಷ ಕನ್ವೆನ್ಷನ್ ಸೆಂಟರ್ನಲ್ಲಿ 'ಒಂದು ವಿಶ್ವ ಟಿಬಿ ಶೃಂಗಸಭೆ' ಕುರಿತು ಮೂರು ದಿನಗಳ ಸಭೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು. ಇದಾದ ಬಳಿಕ ಪ್ರಧಾನಿ ಮೋದಿ 'ಆರೋಗ್ಯಕರ ದೃಷ್ಟಿ, ಸಮೃದ್ಧ ಕಾಶಿ' ಅಭಿಯಾನದ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಪ್ರಧಾನಿ ಜೊತೆ ರಾಜ್ಯಪಾಲ ಆನಂದಿಬೆನ್ ಪಟೇಲ್ ಮತ್ತು ಸಿಎಂ ಯೋಗಿ ಆದಿತ್ಯನಾಥ್ ಕೂಡ ಉಪಸ್ಥಿತರಿದ್ದರು.
प्रधानमंत्री जी जब भी काशी आते हैं तो काशी के लिए कुछ ना कुछ एक नई सौगात लेकर आते हैं। आज प्रधानमंत्री द्वारा काशी के लिए यहां 1780 करोड़ के परियोजनाओं का लोकार्पण और शिलान्यास होने जा रहा है। काशी नव्य और भव्य बन चुकी है: उत्तर प्रदेश के मुख्यमंत्री योगी आदित्यनाथ pic.twitter.com/7gmDk0C0Ls — ANI_HindiNews (@AHindinews) March 24, 2023

ಕಂಟಕವಾಯ್ತು ಮಾನಹಾನಿ ಪ್ರಕರಣ: ವಯನಾಡು ಕಾಂಗ್ರೆಸ್ ಸಂಸದರಿಗೆ ಬಿಗ್ ಶಾಕ್; ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ
ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿ ಅಪರಾಧಿ ಎಂದು ಪರಿಗಣಿಸಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ. ನವದೆಹಲಿ: ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿ ಅಪರಾಧಿ ಎಂದು ಪರಿಗಣಿಸಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ. ಮೋದಿ ಸಮುದಾಯಕ್ಕೆ ಅವಮಾನಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಸೂರತ್ ನ್ಯಾಯಾಲಯ ಎರಡು ವರ್ಷಗಳ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿ ಲೋಕಸಭಾ ಕಾರ್ಯದರ್ಶಿ ಉತ್ಪಲ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಕಳೆದ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಓರ್ವ ಕಳ್ಳ ಎಂದು ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಇವರೆಲ್ಲರ ಸರ್ನೇಮ್ ಒಂದೇ ಆಗಿದ್ದು, ಈ ಎಲ್ಲಾ ಕಳ್ಳರು ದೇಶವನ್ನು ಲೂಟಿ ಮಾಡಿದ್ದಾರೆ ಎಂದು ರಾಹುಲ್ ತಮ್ಮ ಭಾಷಣದಲ್ಲಿ ಹರಿಹಾಯ್ದಿದ್ದರು. ಈ ಹೇಳಿಕೆಯನ್ನು ಆಧಾರಿಸಿ ಬಿಜೆಪಿ ಶಾಸಕ ಮತ್ತು ಗುಜರಾತ್ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ಕ್ರಿಮಿನಲ್ ಮಾನಹಾನಿ ದೂರು ದಾಖಲಿಸಿದ್ದರು.
#RahulGandhi's disqualification effective from date of his conviction March 23: Lok Sabha Secretariat. pic.twitter.com/s8jOdIkRam — The New Indian Express (@NewIndianXpress) March 24, 2023

ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ, ವರದಿಗಳ ಬಗ್ಗೆ ವಿಶ್ವಸಂಸ್ಥೆ ಹೇಳಿದ್ದು ಹೀಗೆ...
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾನಹಾನಿ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ ಮತ್ತು ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವ ಕಾಂಗ್ರೆಸ್ ಯೋಜನೆ ವರದಿಗಳು ವಿಶ್ವಸಂಸ್ಥೆಗೆ ತಿಳಿದಿದೆ ಎಂದು ವಿಶ್ವಸಂಸ್ಥೆ ಮುಖ್ಯಸ್ಥ ಆಂಟೋನಿಯೊ ಗುಟೆರಸ್ ವಕ್ತಾರರು ಹೇಳಿದ್ದಾರೆ. ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾನಹಾನಿ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ ಮತ್ತು ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವ ಕಾಂಗ್ರೆಸ್ ಯೋಜನೆ ವರದಿಗಳು ವಿಶ್ವಸಂಸ್ಥೆಗೆ ತಿಳಿದಿದೆ ಎಂದು ವಿಶ್ವಸಂಸ್ಥೆ ಮುಖ್ಯಸ್ಥ ಆಂಟೋನಿಯೊ ಗುಟೆರಸ್ ವಕ್ತಾರರು ಹೇಳಿದ್ದಾರೆ.
ಭಾರತದ ಪ್ರಜಾಪ್ರಭುತ್ವದ ಬಗ್ಗೆ ಗುಟೆರಸ್ಗೆ ಆತಂಕವಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿಯ ಉಪ ವಕ್ತಾರ ಫರ್ಹಾನ್ ಹಕ್, ರಾಹುಲ್ ಗಾಂಧಿ ಪ್ರಕರಣಕ್ಕೆ ಸಂಬಂಧಿಸಿದ ವರದಿಗಳ ಬಗ್ಗೆ ನಮಗೆ ತಿಳಿದಿದೆ. ಮೇಲ್ಮನವಿ ಸಲ್ಲಿಸುವ ಅವರ ಪಕ್ಷದ ನಿರ್ಧಾರವನ್ನು ಅರ್ಥಮಾಡಿಕೊಂಡಿದ್ದೇವೆ ಎಂದರು.
ಇದನ್ನೂ ಓದಿ: ರಾಹುಲ್ ಗಾಂಧಿಗೆ ಕೋರ್ಟ್ 2 ವರ್ಷ ಜೈಲು ಶಿಕ್ಷೆ: ಕಾಂಗ್ರೆಸ್ ನಾಯಕನಿಗೆ ಅನರ್ಹತೆ ಭೀತಿ!!, ಸದ್ಯಕ್ಕಿಲ್ಲ ಆತಂಕ ಎಂದ ಸಂವಿಧಾನ ತಜ್ಞರು
2019 ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಅವರಿಗೆ ಸೂರತ್ ನ್ಯಾಯಾಲಯ ಗುರುವಾರ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ಐಪಿಸಿ ಸೆಕ್ಷನ್ 499 ಮತ್ತು 500 ರ ಅಡಿ 52 ವರ್ಷದ ಗಾಂಧಿಯನ್ನು ತಪ್ಪಿತಸ್ಥರೆಂದು ಪರಿಗಣಿಸಿದ ನ್ಯಾಯಾಲಯವು ಅವರಿಗೆ ಜಾಮೀನು ನೀಡಿದ್ದು, ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲು 30 ದಿನಗಳವರೆಗೆ ಶಿಕ್ಷೆಯನ್ನು ಅಮಾನತುಗೊಳಿಸಿದೆ.
ನಂತರ ಮಹಾತ್ಮ ಗಾಂಧಿ ಅವರನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ ರಾಹುಲ್ ಗಾಂಧಿ, "ನನ್ನ ಧರ್ಮವು ಸತ್ಯ ಮತ್ತು ಅಹಿಂಸೆಯನ್ನು ಆಧರಿಸಿದೆ. ಸತ್ಯವೇ ನನ್ನ ದೇವರು, ಅಹಿಂಸೆ, ಅದನ್ನು ಪಡೆಯುವ ಸಾಧನವಾಗಿದೆ ಎಂದು ಹೇಳಿದ್ದರು.
ದೆಹಲಿ ಅಬಕಾರಿ ನೀತಿ ಪ್ರಕರಣ: ಸಿಸೋಡಿಯಾ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಕೋರ್ಟ್
ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ದಾಖಲಿಸಿರುವ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಶುಕ್ರವಾರ ಮುಕ್ತಾಯಗೊಳಿಸಿದ... ನವದೆಹಲಿ: ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ದಾಖಲಿಸಿರುವ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಶುಕ್ರವಾರ ಮುಕ್ತಾಯಗೊಳಿಸಿದ ದೆಹಲಿ ನ್ಯಾಯಾಲಯ, ಮಾರ್ಚ್ 31ಕ್ಕೆ ತೀರ್ಪು ಕಾಯ್ದಿರಿಸಿದೆ.
ಪ್ರಕರಣದಲ್ಲಿ ತನ್ನ ವಾದಕ್ಕೆ ಸಂಬಂಧಿಸಿದಂತೆ ಸಿಬಿಐ ಕಿರು ಟಿಪ್ಪಣಿಯನ್ನು ಹಸ್ತಾಂತರಿಸಿದ ನಂತರ ಪ್ರಕರಣದಲ್ಲಿ ಸಿಸೋಡಿಯಾ ಅವರಿಗೆ ನಿಯಮಿತ ಜಾಮೀನು ನೀಡುವ ಕುರಿತು ವಿಶೇಷ ನ್ಯಾಯಾಧೀಶ ಎಂ ಕೆ ನಾಗ್ಪಾಲ್ ತಮ್ಮ ಆದೇಶವನ್ನು ಕಾಯ್ದಿರಿಸಿದ್ದಾರೆ.
ಇದನ್ನು ಓದಿ: ದೆಹಲಿ ಅಬಕಾರಿ ನೀತಿ: ತನಿಖೆಗೆ ಸಹಕರಿಸಿದ್ದೇನೆ ಎಂದ ಸಿಸೋಡಿಯಾ, ಜಾಮೀನು ಅರ್ಜಿಯನ್ನು ವಿರೋಧಿಸಿದ ಸಿಬಿಐ
ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ವಿರೋಧಿಸಿದ ಸಿಬಿಐ, ಅವರು 'ಹಿಂದೆಂದೂ ಕಂಡಿಲ್ಲದ' 18 ಸಚಿವಾಲಯಗಳೊಂದಿಗೆ ವ್ಯವಹರಿಸಿದ್ದಾರೆ ಮತ್ತು ಅವರು ವಿದೇಶಕ್ಕೆ ತೆರಳುವುದಿಲ್ಲವಾದರೂ, ಅವರು ಖಂಡಿತವಾಗಿಯೂ ಸಾಕ್ಷ್ಯ ನಾಶದ ಅಪಾಯವನ್ನು ಹೊಂದಿದ್ದಾರೆ ಎಂದು ಹೇಳಿದೆ.
ಈಗ ರದ್ದಾಗಿರುವ ದೆಹಲಿ ಅಬಕಾರಿ ನೀತಿ 2021-22 ರ ರಚನೆ ಮತ್ತು ಅನುಷ್ಠಾನದಲ್ಲಿನ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸಿಬಿಐ ಫೆಬ್ರವರಿ 26 ರಂದು ಸಿಸೋಡಿಯಾ ಅವರನ್ನು ಬಂಧಿಸಿತ್ತು.
ಶೂರ್ಪನಖಿ ಎಂದಿದ್ದ ಪ್ರಧಾನಿ ಮೋದಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ ಎಂದ ಕಾಂಗ್ರೆಸ್ ನಾಯಕಿ
ಮೋದಿ ಉಪನಾಮದ ಬಗ್ಗೆ ಮಾಡಿದ ಟೀಕೆಗಳಿಗೆ ಸಂಬಂಧಿಸಿದಂತೆ 2019ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಯನ್ನು ಸೂರತ್ ನ್ಯಾಯಾಲಯವು ತಪ್ಪಿತಸ್ಥರೆಂದು ಘೋಷಿಸಿದ ದಿನದ ನಂತರ, ಕಾಂಗ್ರೆಸ್ ನಾಯಕಿ ರೇಣುಕಾ ಚೌಧರಿ ಅವರು ತಮ್ಮ ನಗುವಿಗೆ 'ಶೂರ್ಪನಖಿ' ಎಂದಿದ್ದ ಪ್ರಧಾನಿ ಮೋದಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಘೋಷಿಸಿದರು. ನವದೆಹಲಿ: ಮೋದಿ ಉಪನಾಮದ ಬಗ್ಗೆ ಮಾಡಿದ ಟೀಕೆಗಳಿಗೆ ಸಂಬಂಧಿಸಿದಂತೆ 2019ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಯನ್ನು ಸೂರತ್ ನ್ಯಾಯಾಲಯವು ತಪ್ಪಿತಸ್ಥರೆಂದು ಘೋಷಿಸಿದ ದಿನದ ನಂತರ, ಕಾಂಗ್ರೆಸ್ ನಾಯಕಿ ರೇಣುಕಾ ಚೌಧರಿ ಅವರು ತಮ್ಮ ನಗುವಿಗೆ 'ಶೂರ್ಪನಖಿ' ಎಂದಿದ್ದ ಪ್ರಧಾನಿ ಮೋದಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಘೋಷಿಸಿದರು. 2018ರಲ್ಲಿ ಸಂಸತ್ತಿನಲ್ಲಿ ನೀಡಿದ ಹೇಳಿಕೆಯಿಂದ ಮೋದಿ ತಮ್ಮನ್ನು ಅವಮಾನಿಸಿದ್ದಾರೆ ಎಂದು ಚೌಧರಿ ಟ್ವಿಟರ್ನಲ್ಲಿ ಶುಕ್ರವಾರ ಹೇಳಿದ್ದಾರೆ. ಅಲ್ಲದೆ, ಅವರು ಸದನದ ಕಲಾಪಗಳ ವಿಡಿಯೋವನ್ನು ಸಹ ಪೋಸ್ಟ್ ಮಾಡಿದ್ದಾರೆ.
This classless megalonaniac referred to me as Surpanakha on the floor of the house. I will file a defamation case against him. Let's see how fast courts will act now.. pic.twitter.com/6T0hLdS4YW — Renuka Chowdhury (@RenukaCCongress) March 23, 2023'ಈ ಕ್ಲಾಸ್ಲೆಸ್ ಮೆಗಾಲೊಮೇನಿಯಾಕ್ (ಅಧಿಕಾರ, ಸಂಪತ್ತು ಮತ್ತು ಸ್ಥಾನಮಾನದ ಗೀಳಿನ ಬಯಕೆಯನ್ನು ಹೊಂದಿರುವ ವ್ಯಕ್ತಿಯನ್ನು ಸೂಚಿಸುತ್ತದೆ) ಸದನದಲ್ಲಿ ನನ್ನನ್ನು ಶೂರ್ಪನಖಿ ಎಂದು ಉಲ್ಲೇಖಿಸಿದ್ದಾರೆ. ನಾನು ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ. ಈಗ ನ್ಯಾಯಾಲಯಗಳು ಎಷ್ಟು ವೇಗವಾಗಿ ಕಾರ್ಯನಿರ್ವಹಿಸುತ್ತವೆ ಎಂಬುದನ್ನು ನೋಡೋಣ' ಎಂದಿದ್ದಾರೆ. ಇದನ್ನೂ ಓದಿ: 'ಕಳ್ಳರ ಹೆಸರೆಲ್ಲ ಮೋದಿ ಎಂದೇ ಇರುತ್ತದೆ ಏಕೆ' ಎಂದಿದ್ದ ರಾಹುಲ್ ಗಾಂಧಿ ದೋಷಿ; ಸೂರತ್ ನ್ಯಾಯಾಲಯ ತೀರ್ಪು, 2 ವರ್ಷ ಜೈಲು ಶಿಕ್ಷೆ ವಿಡಿಯೋದಲ್ಲಿ, ಸಭಾಪತಿಯನ್ನುದ್ದೇಶಿಸಿ ಮಾತನಾಡಿರುವ ಮೋದಿ, 'ರೇಣುಕಾ ಜೀ ಅವರಿಗೆ ಏನನ್ನೂ ಹೇಳಬೇಡಿ ಎಂದು ನಾನು ವಿನಂತಿಸುತ್ತೇನೆ. ರಾಮಾಯಣ ಧಾರಾವಾಹಿಯ ನಂತರ ಇಂದು ಅಂತಹ ನಗುವನ್ನು ಕೇಳಲು ನಾನು ಭಾಗ್ಯವಂತನಾಗಿದ್ದೇನೆ' ಎಂದಿದ್ದರು. ಮೋದಿ ಭಾಷಣದ ವೇಳೆ ಚೌಧರಿಯು ಜೋರಾಗಿ ನಗುತ್ತಿದ್ದರಿಂದ ಸಭಾಪತಿ ಚೌಧರಿಯವರಿಗೆ ಮೌನವಾಗಿರುವಂತೆ ಸೂಚಿಸಿದ್ದರು. ಈ ವೇಳೆ ಮೋದಿ ರಾಮಾಯಣವನ್ನು ಉಲ್ಲೇಖಿಸಿ ಹೇಳಿದ್ದರು.

ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ: ಭಾರತದಲ್ಲಿ ಪ್ರಜಾಪ್ರಭುತ್ವ ಸತ್ತು ಹೋಗಿದೆ- ಕಾಂಗ್ರೆಸ್ ಕಿಡಿ
ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹತೆ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಕಾನೂನು ಮತ್ತು ರಾಜಕೀಯವಾಗಿ ಹೋರಾಟ ನಡೆಸುವುದಾಗಿ ಹೇಳಿದೆ. ನವದೆಹಲಿ: ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹತೆ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಕಾನೂನು ಮತ್ತು ರಾಜಕೀಯವಾಗಿ ಹೋರಾಟ ನಡೆಸುವುದಾಗಿ ಹೇಳಿದೆ. ಇದನ್ನೂ ಓದಿ: ಕಂಟಕವಾಯ್ತು ಮಾನಹಾನಿ ಪ್ರಕರಣ: ವಯನಾಡು ಕಾಂಗ್ರೆಸ್ ಸಂಸದರಿಗೆ ಬಿಗ್ ಶಾಕ್: ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ನಾವು ಹೆದರುವುದು ಅಥವಾ ಮೌನವಾಗಿರುವುದಿಲ್ಲ, ಪ್ರಧಾನಿ ಮೋದಿ- ಅದಾನಿ ನಡುವಿನ ಮಹಾ ಮೆಗಾ ಹಗರಣದ ಬಗ್ಗೆ ಜೆಪಿಸಿ ತನಿಖೆಗೆ ವಹಿಸುವ ಬದಲು ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಲಾಗಿದೆ. ಭಾರತದ ಪ್ರಜಾಪ್ರಭುತ್ವ ಸತ್ತು ಹೋಗಿದೆ ಎಂದಿದ್ದಾರೆ.
We will fight this battle both legally and politically. We will not be intimidated or silenced. Instead of a JPC into the PM-linked Adani MahaMegaScam, @RahulGandhi stands disqualified. Indian Democracy Om Shanti. pic.twitter.com/d8GmZjUqd5— Jairam Ramesh (@Jairam_Ramesh) March 24, 2023ರಾಹುಲ್ ಗಾಂಧಿ ವಿರುದ್ಧದ ಕ್ರಮದಿಂದ ದಿಗ್ಭ್ರಮೆಗೊಂಡಿದ್ದೇನೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಹೇಳಿದ್ದಾರೆ. ರಾಜಕೀಯ ಕಾರಣದಿಂದ ಹೀಗೆ ಮಾಡಲಾಗಿದ್ದು, ನಮ್ಮ ಪ್ರಜಾಪ್ರಭುತ್ವಕ್ಕೆ ಕೆಟ್ಟದ್ದನ್ನು ಸೂಚಿಸುತ್ತದೆ ಎಂದು ಅವರು ಹೇಳಿದ್ದಾರೆ.

ಬಿಜೆಪಿಯಿಂದ ಜಾತಿ ರಾಜಕಾರಣ; ನೀರವ್, ಲಲಿತ್ ಮೋದಿಯನ್ನು ಸಮರ್ಥಿಸಿಕೊಳ್ಳುತ್ತಿದೆ: ಕಾಂಗ್ರೆಸ್
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಒಬಿಸಿ ಸಮುದಾಯಗಳನ್ನು ಕಳ್ಳರಿಗೆ ಹೋಲಿಸಿದ್ದಾರೆ ಎಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಹೇಳಿಕೆಯನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ,... ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಒಬಿಸಿ ಸಮುದಾಯಗಳನ್ನು ಕಳ್ಳರಿಗೆ ಹೋಲಿಸಿದ್ದಾರೆ ಎಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಹೇಳಿಕೆಯನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಬಿಜೆಪಿ ಜಾತಿ ರಾಜಕಾರಣ ಮಾಡುತ್ತಿದೆ ಮತ್ತು ಆಡಳಿತ ಪಕ್ಷ ನೀರವ್ ಮೋದಿ ಹಾಗೂ ಲಲಿತ್ ಮೋದಿಯಂತಹ ಪಲಾಯನವಾದಿಗಳನ್ನು ರಕ್ಷಿಸುತ್ತಿದೆ ಎಂದು ಆರೋಪಿಸಿದೆ.
"ಒಬಿಸಿ ಸಮುದಾಯಗಳನ್ನು ಕಳ್ಳರಿಗೆ ಹೋಲಿಸುವ ಮೂಲಕ, ರಾಹುಲ್ ಗಾಂಧಿ ಅವರು ತಮ್ಮ ಜಾತಿವಾದಿ ಮನಸ್ಥಿತಿಯನ್ನು ತೋರಿಸಿದ್ದಾರೆ. ಆದಾಗ್ಯೂ, ಅವರ ಇತ್ತೀಚಿನ ಟೀಕೆ ಆಶ್ಚರ್ಯವೇನಿಲ್ಲ. ಕಳೆದ ಹಲವು ವರ್ಷಗಳಿಂದ ಅವರು ರಾಜಕೀಯ ಭಾಷಣದ ಗೌರವವನ್ನೇ ಕಡಿಮೆ ಮಾಡಿದ್ದಾರೆ" ಎಂದು ನಡ್ಡಾ ಹೇಳಿದ್ದರು.
ಇದನ್ನು ಓದಿ: ಕಂಟಕವಾಯ್ತು ಮಾನಹಾನಿ ಪ್ರಕರಣ: ವಯನಾಡು ಕಾಂಗ್ರೆಸ್ ಸಂಸದರಿಗೆ ಬಿಗ್ ಶಾಕ್: ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ
ನಡ್ಡಾ ಹೇಳಿಕೆಗೆ ಟ್ವೀಟ್ ಮೂಲಕ ತಿರುಗೇಟು ನೀಡಿರುವ ಖರ್ಗೆ, "ಮೋದಿ ಸರ್ಕಾರ ಜೆಪಿಸಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ! ನೀರವ್ ಮೋದಿ, ಲಲಿತ್ ಮೋದಿ ಮತ್ತು ಮೆಹುಲ್ ಚೋಕ್ಸಿ ಅವರು ಸಾರ್ವಜನಿಕರ ಹಣ ಕೊಳ್ಳೆ ಹೊಡೆದು ಓಡಿಹೋಗಿದ್ದಾರೆ. ಆದರೆ ಒಬಿಸಿಗಳು ಹಾಗೆ ಮಾಡಿಲ್ಲ ಅಂದಮೇಲೆ ಅವರನ್ನು ಅವಮಾನಿಸಲಾಗಿದೆ ಅಂತ ಹೇಗೆ ಹೇಳುತ್ತೀರಿ?" "ನಿಮ್ಮ 'ಬೆಸ್ಟ್ ಫ್ರೆಂಡ್' ನಿಂದಾಗಿ SBI/LIC ನಷ್ಟ ಅನುಭವಿಸಿದೆ!" ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
"'ಏಕ್ ತೋ ಚೋರಿ ಮೇ ಸಹೋಗ್ ಫಿರ್ ಜಾತಿಗತ್ ರಾಜನೀತಿ ಕಾ ಪ್ರಯೋಗ್' (ಮೊದಲು ಕಳ್ಳರಿಗೆ ಓಡಿಹೋಗಲು ಸಹಾಯ ಮಾಡಿ ಈಗ ಜಾತಿ ರಾಜಕೀಯ ಮಾಡುತ್ತಿದ್ದೀರಿ)" ಇದು "ನಾಚಿಕೆಗೇಡಿನ" ಸಂಗತಿ ಎಂದು ಖರ್ಗೆ ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಕೋಲ್ಕತ್ತಾ: ಇಂದು ಸಂಜೆ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಲಿರುವ ಎಚ್.ಡಿ ಕುಮಾರಸ್ವಾಮಿ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ ಸಂಜೆ ಜೆಡಿಎಸ್ ನಾಯಕ ಎಚ್ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಟಿಎಂಸಿ ಮೂಲಗಳು ತಿಳಿಸಿವೆ. ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ ಸಂಜೆ ಜೆಡಿಎಸ್ ನಾಯಕ ಎಚ್ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಟಿಎಂಸಿ ಮೂಲಗಳು ತಿಳಿಸಿವೆ.
ಸಂಜೆ 4 ಗಂಟೆಗೆ ಭಬಾನಿಪುರದಲ್ಲಿರುವ ಬ್ಯಾನರ್ಜಿ ಅವರ ನಿವಾಸದಲ್ಲಿ ಸಭೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.
ಮಧ್ಯಾಹ್ನ 3 ಗಂಟೆ ಸುಮಾರಿಗೆ ಕೋಲ್ಕತ್ತಾಕ್ಕೆ ಬಂದಿಳಿಯಲಿರುವ ಎಚ್ಡಿ ಕುಮಾರಸ್ವಾಮಿ ಅವರು ಬ್ಯಾನರ್ಜಿ ನಿವಾಸಕ್ಕೆ ತೆರಳಲಿದ್ದಾರೆ. ಸಭೆಯ ನಂತರ ಕುಮಾರಸ್ವಾಮಿ ಅವರು ಸುದ್ದಿಗಾರರೊಂದಿಗೆ ಮಾತನಾಡುವ ಸಾಧ್ಯತೆಯಿದೆ ಎಂದು ಜೆಡಿಎಸ್ ಮುಖಂಡರೊಬ್ಬರು ತಿಳಿಸಿದ್ದಾರೆ.
ಉಭಯ ನಾಯಕರು ದೇಶದ ಪ್ರಸ್ತುತ ರಾಜಕೀಯ ಪರಿಸ್ಥಿತಿ ಮತ್ತು 2024 ರ ಲೋಕಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಮುಂದಿನ ಮಾರ್ಗಗಳ ಬಗ್ಗೆ ಚರ್ಚಿಸಲಿದ್ದಾರೆ ಎಂದು ಟಿಎಂಸಿ ಮೂಲಗಳು ತಿಳಿಸಿವೆ.
ಕಾಂಗ್ರೆಸ್ಸೇತರ, ಬಿಜೆಪಿಯೇತರ ನಾಯಕರೊಂದಿಗಿನ ಸಭೆಗಳು ಪ್ರಾದೇಶಿಕ ಶಕ್ತಿಗಳ ನಡುವೆ ಒಗ್ಗಟ್ಟು ಮೂಡಿಸುವ ಪಕ್ಷದ ಪ್ರಯತ್ನಗಳ ಭಾಗವಾಗಿದೆ ಎಂದು ಅವರು ಹೇಳಿದರು.
2019ರ ಜನವರಿಯಲ್ಲಿ ಕೋಲ್ಕತ್ತಾದಲ್ಲಿ ಬ್ಯಾನರ್ಜಿ ಕರೆದಿದ್ದ ವಿರೋಧ ಪಕ್ಷಗಳ ಸಭೆಯಲ್ಲಿ ಕುಮಾರಸ್ವಾಮಿ ಭಾಗವಹಿಸಿದ್ದರು.
ಈ ಸಭೆಯು ಒಂದು ವಾರದೊಳಗೆ ಬಿಜೆಪಿಯೇತರ, ಕಾಂಗ್ರೆಸ್ಸೇತರ ನಾಯಕರೊಂದಿಗೆ ಮಮತಾ ಬ್ಯಾನರ್ಜಿಯವರ ಮೂರನೇ ಸಭೆಯಾಗಿದೆ.
ಗುರುವಾರ, ಬ್ಯಾನರ್ಜಿ ಅವರು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರನ್ನು ಭುವನೇಶ್ವರದಲ್ಲಿ ಭೇಟಿಯಾದರು.
ಕಳೆದ ವಾರ ಅವರು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ಭೇಟಿಯಾಗಿದ್ದರು.
ಖರ್ಗೆ ಕೈ ಹಿಡಿದು ಹಾಸ್ಯದ ಮೂಲಕ ಬಿಜೆಪಿಗೆ ಟಾಂಗ್ ನೀಡಿದ ರಾಹುಲ್! ವಿಡಿಯೋ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೈಲು ಶಿಕ್ಷೆ ಬಿಕ್ಕಟ್ಟಿನ ನಡುವೆ ಹಾಸ್ಯಪ್ರಜ್ಞೆ ಮೆರೆದಿದ್ದಾರೆ. ಸಂಸತ್ತಿನಲ್ಲಿ ಕಾಂಗ್ರೆಸ್ ಸಂಸದರ ಸಭೆ ಬಳಿಕ ಪಕ್ಷದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮೆಟ್ಟಿಲುಗಳಿಂದ ಕೆಳಗೆ ಇಳಿಯಲು ನೆರವಾಗಿದ್ದಾರೆ. ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೈಲು ಶಿಕ್ಷೆ ಬಿಕ್ಕಟ್ಟಿನ ನಡುವೆ ಹಾಸ್ಯಪ್ರಜ್ಞೆ ಮೆರೆದಿದ್ದಾರೆ. ಸಂಸತ್ತಿನಲ್ಲಿ ಕಾಂಗ್ರೆಸ್ ಸಂಸದರ ಸಭೆ ಬಳಿಕ ಪಕ್ಷದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮೆಟ್ಟಿಲುಗಳಿಂದ ಕೆಳಗೆ ಇಳಿಯಲು ನೆರವಾಗಿದ್ದಾರೆ. ನಂತರ ರಾಹುಲ್, "ನಾನು ಈಗ ನಿಮ್ಮನ್ನು ಮುಟ್ಟಿದರೆ, ನಿಮ್ಮ ಬೆನ್ನಿನ ಮೇಲೆ ನನ್ನ ಮೂಗು ಒರೆಸುತ್ತೇನೆ ಎಂದು ಬಿಜೆಪಿಯವರು ಹೇಳುತ್ತಾರೆ. ಸಂಪೂರ್ಣ ಅಸಂಬದ್ಧ, ನೀವು ಅದನ್ನು ನೋಡಿದ್ದೀರಾ? ಎಂದು ನಗುವಿನ ಮುಖದೊಂದಿಗೆ ಹಾಸ್ಯವಾಡಿದರು.
#WATCH | "If I touch you now, they say I'm wiping my nose on your back. Utter nonsense. Have you seen that? That I am helping you over there, they're saying that I'm wiping my nose on you," says Congress MP Rahul Gandhi as he helps party chief Mallikarjun Kharge down the stairs. pic.twitter.com/l6qUSdfS0i— ANI (@ANI) March 24, 2023ಭಾರತ್ ಜೋಡೋ ಯಾತ್ರೆಯ ವೇಳೆ ಮಾಜಿ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅಲ್ವಾರ್ ಅವರು ರಾಹುಲ್ ಅವರ ಶೂಲೇಸ್ಗಳನ್ನು ಕಟ್ಟಿದ್ದರು ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಹೇಳಿಕೊಂಡಿದ್ದರು. ನನ್ನ ಶೂಲೇಸ್ಗಳನ್ನು ಕಟ್ಟುತ್ತಿದ್ದೇ ಹೊರತು ರಾಹುಲ್ ಗಾಂಧಿಯವರದ್ದಲ್ಲ ಎಂದು ಸ್ಪಷ್ಟಪಡಿಸಿದ್ದ ಅಲ್ವಾರ್ ಮಾಳವಿಯಾ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಬೆದರಿಕೆ ಹಾಕಿದ್ದರು.

Credits : K.Prabha
Subscribe , Follow on