-->

ಆರೋಗ್ಯ ಕಾಪಾಡುವ ಅರಶಿನ - Turmeric Health Benefits

 ಆರೋಗ್ಯ ಕಾಪಾಡುವ ಅರಶಿನ(ತುಳುವಿನಲ್ಲಿ ಮಂಜಲ್): ಎರಡು ಮೂರು ದಿವಸದಿಂದ ತಡೆಯಲಾಗದ ತಲೆನೋವು. ನನ್ನನ್ನು ನಾನು ಮನೆ ಮದ್ದುಗಳ ಅನ್ವೇಷಣೆಯಲ್ಲಿ ತೊಡಗಿಸಿಕೊಂಡು ಏನಾದರೂ ಸಾದಿಸಬೇಕೆಂಬ ಛಲ.ಮಾತ್ರೆ,ಕಷಾಯ,ಗುಳಿಗೆ ಯಾವುದರಿಂದಲೂ ಪ್ರಯೋಜನ ಕಾಣದಿದ್ದಾಗ ಸೀದಾ  ಅಡುಗೆ ಕೋಣೆಗೆ ಬಂದೆ.ಅರಶಿಣದ ಪ್ಲಾಸ್ಟಿಕ್ ಡಬ್ಬಿಯಿಂದ ಒಂದು ಟೀ ಸ್ಪೂನ್ ಅರಸಿಣ 5 ಸ್ಪೂನು ನೀರಿಗೆ ಹಾಕಿ ಕಲಡಿಸಿ ಕುಡಿದೆ. ಹೊಟ್ಟೆಯಲ್ಲಿ ಏನೋ ತಳಮಳವಾಗತೊಡಗಿತು. 2 ನಿಮಿಷ ಬಿಟ್ಟು ಒಂದು ಸಣ್ಣ ತಂಬಿಗೆ ನೀರು ಕುಡಿದೆ. ಪವಾಡವೋ ಎಂಬಂತೆ 2 ದಿವಸದಿಂದ ಕಾಡುತ್ತಿದ್ದ ತಲೆನೋವು 2 ಘಂಟೆಯಲ್ಲಿ ಗುಣಮುಖ ವಾಗಿ ಇದೀಗ ಆರಾಮವಾಗಿ ತಮಗೆಲ್ಲರಿಗೂ ತಿಳಿಸುವ ಮನಸಾಯಿತು,ತಿಳಿಸುತ್ತಿದ್ದೇನೆ! ಅರಶಿನದ ಮಹತ್ವದ ನಿಜವಾದ ಸ್ವತಃ  ಅನುಭವ.
 
ಮೊದಲೆಲ್ಲ ನಮ್ಮ ಮನೆಯ ಸುತ್ತಲೂ ಸಿಗುವ ಸೊಪ್ಪು, ತರಕಾರಿಗಳು, ಗಿಡ ಮೂಲಿಕೆಗಳನ್ನೇ ಬಳಸಿಕೊಂಡು ಆರೋಗ್ಯವನ್ನು ಕಾಪಾಡಿಕೊಳ್ಳುತ್ತಿದ್ದೆವು. ಉದಾಹರಣೆಗೆ ನಮ್ಮ ಮನೆಯಲ್ಲಿರುತ್ತಿದ್ದ ಅರಶಿನ ಕೂಡ ಹಲವು ಸಂದರ್ಭಗಳಲ್ಲಿ ಔಷಧಿಯಾಗಿ ಬಳಕೆಯಾಗುತ್ತಿತ್ತು. ಇದರಲ್ಲಿರುವ ರೋಗ ನಿರೋಧಕ ಶಕ್ತಿಗಳು ನಮ್ಮ ಆರೋಗ್ಯವನ್ನು ಕಾಪಾಡುತ್ತಿತ್ತು. ಆದ್ದರಿಂದ ಇದನ್ನು ಮನೆ ಮದ್ದಾಗಿ ಉಪಯೋಗಿಸುತ್ತಿದ್ದರು. ಇವತ್ತು ಹೆಚ್ಚಿನವರಿಗೆ ಅರಶಿನದಲ್ಲಿ ಏನೇನು ಗುಣಗಳಿವೆ ಎಂಬುದೇ ಗೊತ್ತಿಲ್ಲ.



ಹಾಗೆ ನೋಡಿದರೆ ಅರಶಿನದಲ್ಲಿ ಬಹಳಷ್ಟು ಔಷಧೀಯ ಗುಣಗಳಿರುವುದನ್ನು ನಾವು ಕಾಣಬಹುದು.

1. ಮೇಲೆ ತಿಳಿಸಿದ ಸ್ವಂತ ಅನ್ವೇಷಣೆಯಂತೆ ಕಫ,ಶೀತ,ಬಾಯಿಹುಣ್ಣು,ತಲೆನೋವಿಗೆ  ರಾಮ ಬಾಣ.

2. ಅರಶಿನದಪುಡಿಯನ್ನು ಸಮಭಾಗ ಸುಣ್ಣದೊಂದಿಗೆ ಕೂಡಿಸಿ ಮಿಶ್ರಣವನ್ನು ಚೆನ್ನಾಗಿ ಅರೆದು ದಪ್ಪವಾಗಿ ಲೇಪಿಸಿ ಉಗುರಿಗೆ ಕಟ್ಟಿದರೆ ಉಗುರು ಸುತ್ತು ಗುಣಮುಖವಾಗುತ್ತದೆ.

3. ಚಳಿಗಾಲದಲ್ಲಿ ತುಟಿ, ಅಂಗೈ, ಅಂಗಾಲು ಸಾಮಾನ್ಯವಾಗಿ ಬಿರುಕು ಬಿಡುತ್ತದೆ. ಈ ಸಂದರ್ಭ ಅರಶಿನ ಗಂಧವನ್ನು ಹಾಲಿನ ಕೆನೆಯಲ್ಲಿ ಚೆನ್ನಾಗಿ ಮಿಶ್ರಮಾಡಿ ಬಿರುಕುಗಳಿಗೆ ಲೇಪಿಸಿದರೆ ಬಿರುಕುಗಳು ಮಾಯವಾಗುತ್ತವೆ.

4. ಅರಶಿನದ ಚೂರ್ಣವನ್ನು ಕೊಬ್ಬರಿ ಎಣ್ಣೆ ಅಥವಾ ಹರಳೆಣ್ಣೆಯಲ್ಲಿ ಮಿಶ್ರಮಾಡಿ ಅಂಗಾಂಗಳಿಗೆ ಹಚ್ಚಿ ಚೆನ್ನಾಗಿ ಸ್ನಾನ ಮಾಡಿದ್ದೇ ಆದರೆ  ಅಂಗಾಂಗಳ ನೋವು ನಿವಾರಣೆಯಾಗಿ ದೇಹಕ್ಕೆ ವಿಶ್ರಾಂತಿ ದೊರಕುವುದರೊಂದಿಗೆ ನಿದ್ದೆಯೂ ಚೆನ್ನಾಗಿ ಬರುತ್ತದೆ.

5. ಎಲೆಅಡಿಕೆ ತಿನ್ನುವಾಗ ಒಮ್ಮೊಮ್ಮೆ ಸುಣ್ಣ ಜಾಸ್ತಿಯಾಗಿ ನಾಲಿಗೆ ಬೆಂದು ಹೋದರೆ ಹಸಿ ಅರಶಿನದ ಕೊಂಬನ್ನು ನೀರಿನಲ್ಲಿ ತೇದು ನಾಲಿಗೆ ಮೇಲೆ ಬೆಂದ ಭಾಗಕ್ಕೆ ಲೇಪಿಸಬಹುದು.

6. ಕೆಮ್ಮು, ನೆಗಡಿ, ಗಂಟಲು ನೋವು, ಕಾಣಿಸಿಕೊಂಡಾಗ ಬೆಳ್ಳುಳ್ಳಿ ಶುಂಠಿಯೊಂದಿಗೆ ಅರಶಿನದ ಪುಡಿಯನ್ನು ಸೇರಿಸಿ ಕುದಿಸಿದ ಹಾಲಿನೊಂದಿಗೆ ಮಲಗುವ ಮುನ್ನ ಸೇವಿಸಿದರೆ ನಿವಾರಣೆಯಾಗುತ್ತದೆ.

7. ಸ್ತ್ರೀಯರ ಮೈಯ್ಯಲ್ಲಿ ಅನಾವಶ್ಯಕ ಕೂದಲುಗಳಿದ್ದರೆ ಸ್ನಾನಕ್ಕೆ ಮುನ್ನ ಕೆನ್ನೆ, ಕೈಕಾಲುಗಳಿಗೆ ಅರಶಿನವನ್ನು ಹಚ್ಚಿ ಬಳಿಕ ಸ್ನಾನ ಮಾಡಿದರೆ ಕೂದಲು ಕಡಿಮೆಯಾಗಿ ಮುಖದ ಕಾಂತಿ ಹೆಚ್ಚುತ್ತದೆ. ಜತೆಗೆ ಮೊಡವೆಗಳು ಕೂಡ ಮಾಯವಾಗುತ್ತವೆ.

8. ಅರಶಿನದ ಬೇರಿನಲ್ಲಿ ಶೇ.5ರಷ್ಟು ವಿರ್ಮೆರಾಲ್ ಎಣ್ಣೆಯ ಅಂಶಗಳಿದ್ದು ಆಹಾರ ಪದಾರ್ಥಗಳಿಗೆ ರಂಗು ನೀಡುತ್ತದೆ.

ಹುಡಿ ಮಾಡಿದ ಅರಶಿನ ಅಥವಾ ಹಳದಿ ಸರ್ವರೋಗಕ್ಕೂ ಪರಿಹಾರಕವಾಗಿದೆ. ಬರೀ ಅಡುಗೆಮನೆಯಲ್ಲಿ ಮಾತ್ರ ಇದರ ಬಳಕೆಯಲ್ಲ ನಮ್ಮ ಪ್ರತೀ ಚಟುವಟಿಕೆಯಲ್ಲೂ ಇದು ಕಾರ್ಯವ್ಯಾಪಿಯಾಗಿದೆ. ಸುಟ್ಟ ಗಾಯಗಳಿಂದ ನಮ್ಮ ದೇಹವನ್ನು ಅರಶಿನ ಕಾಪಾಡುತ್ತದೆ. ಮುಖದ ಸೌಂದರ್ಯಕ್ಕೂ ಇದರ ಕೊಡುಗೆ ಅಪಾರ.

 9.ಗಾಯ ಮತ್ತು ಸುಟ್ಟ ನೋವುಗಳಿಂದ ನಮ್ಮನ್ನು ರಕ್ಷಿಸುವ ಅರಶಿನ ನೈಸರ್ಗಿಕ ಆಂಟಿಸೆಪ್ಟಿಕ್ ಮತ್ತು ಬ್ಯಾಕ್ಟಿರಿಯಾ ವಿರೋಧಿ ಅಂಶವಾಗಿದೆ.

10.ಜಠರವನ್ನು ನೈಸರ್ಗಿವಾಗಿ ಶುದ್ಧ ಮಾಡುವಲ್ಲಿ ಅರಶಿನದ ಪಾತ್ರ ಹಿರಿದು.

 11.ಮೆದುಳಿನಲ್ಲಿ ರಚಿತವಾದ ಅಮ್ಲೋಯ್ಡ್ ಲೋಳೆಯನ್ನು ತೆಗೆದುಹಾಕಿ ಅಲ್ಙೀಮೀರ್ ರೋಗದ ಪ್ರಕ್ರಿಯೆಯನ್ನು ನಿರ್ಬಂಧಿಸಿ ಮೆದುಳನ್ನು ಆರೋಗ್ಯವಾಗಿರಿಸುತ್ತದೆ.

12. ಕ್ಯಾನ್ಸರ್‌ನ ಹಲವು ಬಗೆಗಳಲ್ಲಿ ಸಂಭವಿಸುವ ಸ್ಥಾನಾಂತರಗಳನ್ನು (ದ್ವಿತೀಯ ಹಾನಿಕಾರಕ ಟ್ಯೂಮರ್) ಅರಶಿನ ತೊಡೆದುಹಾಕುತ್ತದೆ.

13.ಇದೊಂದು ನೈಸರ್ಗಿಕ ಉರಿಯೂತ ವಿರೋಧಿ ಶಕ್ತಿಯಾಗಿದ್ದು ಹಲವಾರು ರೋಗಕ್ಕೆ ಉರಿಯೂತ ವಿರೋಧಿ ಔಷಧಿಯಾಗಿ ಕಾರ್ಯನಿರ್ವಹಿಸುತ್ತದೆ. ಇದರಿಂದ ಯಾವುದೇ ಹಾನಿ ಸಂಭವಿಸುವುದಿಲ್ಲ.

 14..ಅರಶಿನ ನೈಸರ್ಗಿಕ ನೋವು ನಿವಾರಕವಾಗಿದ್ದು ಸಿಒಎಕ್ಸ್-2 ಇದರಲ್ಲಿದೆ (ಉರಿಯೂತ ವಿರೋಧಿ).

15.ಇದು ಕೊಬ್ಬನ್ನು ಕರಗಿಸುವ ಗುಣವನ್ನು ಹೊಂದಿದ್ದು ತೂಕ ನಿಯಂತ್ರಣಕ್ಕೆ ಸಹಕಾರಿ.

 16.ಖಿನ್ನತೆಯ ಚಿಕಿತ್ಸೆಗಾಗಿ ಚೀನಾದಲ್ಲಿ ಅರಶಿನವನ್ನು ಬಳಸಲಾಗುತ್ತದೆ.

 17.ಅರಶಿನ ನೈಸರ್ಗಿಕ ಉರಿಯೂತ ನಿವಾರಕವಾಗಿರುವುದರಿಂದ ಸಂಧಿವಾತಕ್ಕೆ ಇದನ್ನು ಬಳಸಲಾಗುತ್ತದೆ.

 18.ಅರಶಿನವು ಪಾಕ್ಲಿಟೇಕ್ಸಲ್‌ನೊಂದಿಗೆ ಕೀಮೋಥೆರಪಿಯ ಪರಿಣಾಮಗಳನ್ನು ಹೆಚ್ಚಿಸುತ್ತದೆ ಮತ್ತು ಅಡ್ಡಪರಿಣಾಮಗಳನ್ನು ಕಡಿಮೆ ಮಾಡುತ್ತದೆ.

 19.ಮೇದೋಜೀರಕ ಗ್ರಂಥಿಯ ಕ್ಯಾನ್ಸರ್‌ಗೆ ಉತ್ತಮ ಔಷಧಿ ಅರಶಿನವಾಗಿದೆ ಎಂಬುದು ಅಧ್ಯಯನಗಳಿಂದ ತಿಳಿದುಬಂದಿದೆ.

 20.ಮಲ್ಟಿಮಲ್ ಮೈಲೋಮಾ (ಕ್ಯಾನ್ಸರ್ ಪ್ಲಾಸ್ಮಾ ಕೋಶಗಳು) ವನ್ನು ತೊಡೆದುಹಾಕುವಲ್ಲಿ ಅರಶಿನದ ಮಹತ್ವದ ಕುರಿತು ಸಂಶೋಧನೆಗಳು ಜಾರಿಯಲ್ಲಿದೆ.

 21.ಟ್ಯೂಮರ್‌ನಲ್ಲಿ ಉಂಟಾಗುವ ಹೊಸ ರಕ್ತ ಕಣಗಳ ಬೆಳವಣಿಗೆಯನ್ನು ಅರಶಿನವು ನಿಲ್ಲಿಸುತ್ತದೆ.

22.ಗಾಯ ಒಣಗುವುದರಲ್ಲಿ ಮತ್ತು ಹೊಸ ಚರ್ಮ ಬರುವಂತೆ ಮಾಡುವಲ್ಲಿ ಅರಶಿನದ ಪಾತ್ರ ಹಿರಿದಾದುದು.

23.ಸೋರಿಯಾಸಿಸ್ ಹಾಗೂ ಇತರ ಚರ್ಮ ರೋಗಗಳನ್ನು ಉಪಚರಿಸುವಲ್ಲಿ ಅರಶಿನ ಸಹಾಯ ಮಾಡುತ್ತದೆ. ಇನ್ನಷ್ಟು ಮಾಹಿತಿಗಾಗಿ ಈ ಲಿಂಕ್ ಅನ್ನು ಕ್ಲಿಕ್ ಮಾಡಿ: ಜೀರ್ಣಕ್ರಿಯೆ ಸುಧಾರಿಸುವ ಉತ್ತಮ ಆಹಾರಗಳು

24.ಎದೆ ನೋವಿಗಾಗಿ ಮತ್ತು ಹೊಟ್ಟೆ ನೋವು ನಿವಾರಣೆಗಾಗಿ ಚೀನಾದಲ್ಲಿ ಅರಶಿನವನ್ನು ಬಳಸುತ್ತಾರೆ.

25.ಸಾಮಾನ್ಯ ಉರಿಯೂತ ಪರಿಸ್ಥಿತಿಗಳನ್ನು ಉಪಚರಿಸಲು ಭಾರತದಲ್ಲಿ ಅರಶಿನ ಉಪಯೋಗಕಾರಿಯಾಗಿದೆ.

26. ಹೊಟ್ಟೆಯ ಅಲ್ಸರ್ ಅನ್ನು ನಿವಾರಣೆ ಮಾಡಲು ಅರಶಿನ ಸಹಕಾರಿಯಾಗಿದೆ.

 27.ಇಲಿಗಳಲ್ಲಿರುವ ಬಹು ಸ್ಕೆಲೋರಿಸೀಸ್ (ರೋಗವನ್ನು ಹರಡಬಲ್ಲ ಗುಣ) ಬೆಳವಣಿಗೆಯನ್ನು ನಿಧಾನವಾಗಿಸುವ ಗುಣ ಅರಶಿನಕ್ಕಿದೆ ಎಂಬುದನ್ನು ಕಂಡುಹಿಡಿಯಲಾಗಿದೆ.

28.

 1) ಹಾಲು ಹಾಗೂ ಅರಶಿನಗಳಲ್ಲಿ ಪ್ರಕೃತಿ ಸಹಜವಾದ ಅನೇಕ ಔಷಧೀಯ ಗುಣಗಳಿವೆ. ಹಾಲು ನಮ್ಮ ದೇಹಕ್ಕೆ ಸಂಪೂರ್ಣ ಪೋಷಕಾಂಶಗಳನ್ನು ಒದಗಿಸಿದರೆ ಅರಶಿನ ಅನಾರೋಗ್ಯಗಳು ಬರದಂತೆ ತಡೆಯುತ್ತದೆ. ಇದನ್ನು ಎರಡನ್ನೂ ಬೆರೆಸಿ ಕುಡಿಯುವುದರಿಂದ ನಮಗೆ ಅನೇಕ ಪ್ರಯೋಜನಗಳು ಆಗುತ್ತವೆ. ಈ ನಿಟ್ಟಿನಲ್ಲಿ ರಾತ್ರಿ ಮಲಗುವುದಕ್ಕೂ ಮುನ್ನ ಒಂದು ಲೋಟ ಹಾಲಿಗೆ ಕಾಲು ಚಮಚ ಅರಶಿನ ಬೆರೆಸಿ ಕುಡಿದರೆ ಆಗುವ ಲಾಭಗಳು:-

2) ರಾತ್ರಿ ಹಾಲಿಗೆ ಅರಶಿನ ಬೆರೆಸಿ ಕುಡಿದರೆ…ಶ್ವಾಸಕೋಶ ಸಮಸ್ಯೆಗಳಿಗೆ ಉಪಶಮನ ದೊರೆಯುತ್ತದೆ.

3) ಕೆಮ್ಮು,ನೆಗಡಿ ಕಡಿಮೆಯಾಗುತ್ತವೆ. ಶ್ವಾಸಕೋಶಗಳಲ್ಲಿ ಸೇರಿಕೊಂಡಿರುವ ಕಫ ಕರಗುತ್ತದೆ. ಈ ಋತುವಿನಲ್ಲಿ ಬರುವ ಶ್ವಾಸಕೋಶ ಸಮಸ್ಯೆಗಳಿಂದ ಉಪಶಮನ ಲಭಿಸುತ್ತದೆ.

4) ತಲೆ ನೋವಿನಿಂದ ನರಳುತ್ತಿರುವವರು, ನಿದ್ರಾ ಹೀನತೆ ಉಳ್ಳವರು ರಾತ್ರಿ ಮಲಗುವುದಕ್ಕೆ ಮುನ್ನ ಹಾಲಿಗೆ ಅರಶಿನ ಬೆರೆಸಿ ಕುಡಿದರೆ ಒಳ್ಳೆಯ ಫಲಿತಾಂಶ ಲಭಿಸುತ್ತದೆ. ಬೆಳಗಾಗುವಷ್ಟರಲ್ಲಿ ತಲೆ ನೋವು ಮಾಯವಾಗಿರುತ್ತದೆ. ನಿದ್ದೆ ಚೆನ್ನಾಗಿ ಬಂದಿರುತ್ತದೆ.

5) ಅರಶಿನದಲ್ಲಿರುವ ಕರ್ಕ್ಯುಮಿನ್ ಎಂಬ ಪದಾರ್ಥವು ನಮ್ಮ ಶರೀರದಲ್ಲಿರುವ ಲಿವರ್, ಹೊಟ್ಟೆಯ ಸುತ್ತಲೂ ಕೊಬ್ಬು ಸಂಗ್ರಹಗೊಳ್ಳದಂತೆ ನೋಡಿಕೊಳ್ಳುತ್ತದೆ. ಇದರಿಂದಾಗಿ ಶರೀರದ ಅಧಿಕ ಭಾರ ಕಡಿಮೆಯಾಗುತ್ತದೆ.

6) ಸ್ತ್ರೀಯರಿಗೆ ಋತು ಸಮಯದಲ್ಲಿ ಬರುವ ಹೊಟ್ಟೆ ನೋವು ಕಡಿಮೆಯಾಗುತ್ತದೆ.

7) ಸಕ್ಕರೆ ಖಾಯಿಲೆ ಹತೋಟಿಯಲ್ಲಿರುತ್ತದೆ. ಫಾಸ್ಟಿಂಗ್ ಬ್ಲಡ್ ಗ್ಲೂಕೋಸ್ ಮಟ್ಟ ಕಡಿಮೆಯಾಗುತ್ತದೆ.

8) ಕಾಮಾಲೆ ರೋಗದಿಂದ ಬಳಲುತ್ತಿರುವವರು ಈ ಮಿಶ್ರಣವನ್ನು ಸೇವಿಸಿದಲ್ಲಿ ಈ ಕಾಯಿಲೆಯಿಂದ ಮುಕ್ತಿ ಪಡೆಯಬಹುದು.
 

9) ಶರೀರದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸೋಂಕು ಹತ್ತಿರ ಸುಳಿಯುವುದಿಲ್ಲ. ನೋವುಗಳು ನಿವಾರಣೆ ಯಾಗುತ್ತವೆ. ಅರಶಿನ ದಲ್ಲಿರುವ ಸಹಜ ಸಿದ್ಧವಾದ ಆಂಟೀ ಇನ್ ಫ್ಲಮೇಟರಿ ಗುಣದಿಂದ ನೋವು,ಬಾವು ಕಡಿಮೆಯಾಗುತ್ತದೆ.

10)  ಕೀಲು ನೋವುಗಳೂ ಕಡಿಮೆಯಾಗುತ್ತವೆ.
ರಕ್ತ ಶುದ್ಧಿಯಾಗುತ್ತದೆ. ಚರ್ಮ ರೋಗಗಳು ನಿವಾರಣೆಯಾಗುತ್ತವೆ.

11) ಜೀರ್ಣಾಶಯ ಸಮಸ್ಯೆಗಳಾದ ಗ್ಯಾಸ್,ಅಸಿಡಿಟೀ,ಅಜೀರ್ಣ, ಮಲಬದ್ಧತೆ ಹತ್ತಿರ ಸುಳಿಯುವುದಿಲ್ಲ. ಸೇವಿಸಿದ ಆಹಾರ ಸರಿಯಾಗಿ ಜೀರ್ಣವಾಗುತ್ತದೆ.

12)  ಅರಶಿನ ಬಳ್ಳಿ :- ಪಶ್ಚಿಮ ಘಟ್ಟದ ಕಾಡುಗಳಲ್ಲಿ ಬೆಳೆಯುವ ಸಸ್ಯ ಸಂಪನ್ಮೂಲ. ದ್ವಿದಳ ಸಸ್ಯವಾದ ಇದರ ಎಲೆ ಮೇಲ್ನೋಟಕ್ಕೆ ವೀಳ್ಯದೆಲೆಯಂತೆ ಗೋಚರಿಸಿದರೂ, ಇದರ ಮೇಲೈ ವೀಳ್ಯದೆಲೆಯಷ್ಟು ನುಣುಪಾಗಿಲ್ಲ, ಅಲ್ಲದೇ ಗಾತ್ರದಲ್ಲಿಯೂ ದೊಡ್ಡದು. ಎಲೆಯ ಹಿಂಭಾಗ ಬೆಳ್ಳಿಯ ಹೊಳಪು. ಚಿಗುರಿನ ಬಣ್ಣವೂ ಬೆಳ್ಳಿಯದ್ದೇ. ಸಂತಾನಾಭಿವೃದ್ಧಿ ಬೀಜದಿಂದ. ಗಾಢ ಅರಶಿನ ಬಣ್ಣದ ಇದರ ಕಾಂಡದ ರುಚಿ ಕಹಿ. ಈ ಬಳ್ಳಿಯ ಬೆಳವಣಿಗೆ ನಿಧಾನ.

ಅರಿಶಿನ ಹಾಲು  CONTENTS  ಅಮೃತದಂತಹ ಹಾಲು ಆರೋಗ್ಯಕ್ಕೆ ಒಳ್ಳೆಯದಲ್ಲವಂತೆ! ನಂಬುತ್ತೀರಾ?  ಅರಿಶಿನ ಹಾಲಿನ ಉಪಯೋಗಗಳು
ಉಸಿರಾಟದ ತೊಂದರೆ
ಕ್ಯಾನ್ಸರ್
ನಿದ್ರಾಹೀನತೆ
ಶೀತ ಮತ್ತು ಕೆಮ್ಮು
ಸಂಧಿವಾತ
ನೋವು ಮತ್ತು ವೇದನೆ
ಉತ್ಕರ್ಷಣ ನಿರೋಧಕ
ರಕ್ತ ಶುದ್ಧೀಕರಣ
ಲಿವರ್ ಕ್ರಿಯೆಗೆ ಸಹಾಯ
ಮೂಳೆಗಳ ಆರೋಗ್ಯ
ಜೀರ್ಣಕ್ರಿಯೆ
ಮುಟ್ಟಿನ ಸೆಳೆತ
ಗುಳ್ಳೆಗಳು ಮತ್ತು ಚರ್ಮ ಕೆಂಪಾಗುವುದು
ತೂಕ ನಷ್ಟ (ತೂಕ ಕಡಿಮೆಯಾಗುವುದು)


ಅಮೃತದಂತಹ ಹಾಲು ಆರೋಗ್ಯಕ್ಕೆ ಒಳ್ಳೆಯದಲ್ಲವಂತೆ! ನಂಬುತ್ತೀರಾ?
ನೀರಿನ ಬಳಿಕ ನಮ್ಮ ದೇಹಕ್ಕೆ ಅಮೃತಸಮಾನವಾದ ದ್ರವ ಎಂದಿದ್ದರೆ ಅದು ಹಾಲು. ಪ್ರತಿದಿನ ಹಾಲು ಕುಡಿದು ಆರೋಗ್ಯವಂತರಾಗಿರು ಎಂದೇ ಹಿರಿಯರು ಆಶೀರ್ವಾದಿಸುವುದೂ ಹಾಲಿನ ಗುಣವನ್ನು ಎತ್ತಿಹಿಡಿಯುತ್ತದೆ. ಮಗುವಿನ ಜನನವಾದ ಬಳಿಕ ಮೊತ್ತಮೊದಲಾಗಿ ಕುಡಿಯುವುದೇ ಹಾಲನ್ನು. ಆದರೆ ವಯಸ್ಕರಾದ ಬಳಿಕ ಹಾಲು ನಮ್ಮ ದೇಹಕ್ಕೆ ಒಳ್ಳೆಯದನ್ನು ಮಾಡುವುವಂತೆಯೇ ಕೊಂಚ ಕೆಟ್ಟದನ್ನೂ ಮಾಡುತ್ತದೆ ಎಂದರೆ ನಂಬುತ್ತೀರಾ? ಹಾಲಿಗೆ ಅರಿಶಿನ ಹಾಕಿ ಕುಡಿದರೆ ಹತ್ತಾರು ಲಾಭ !

ಅಡುಗೆ ಮನೆಯಲ್ಲಿರುವ ಅರಿಶಿನ ಮತ್ತು ಹಾಲು ಸೂಕ್ಷ್ಮ ಜೀವ ನಿರೋಧಕ ಶಕ್ತಿಯನ್ನು ಹೊಂದಿರುತ್ತವೆ. ನಿಮ್ಮ ನಿತ್ಯದ ಇತರ ಆಹಾರಗಳೊಂದಿಗೆ ಈ ಎರಡು ವಸ್ತುಗಳನ್ನು ಬಳಸುವುದರಿಂದ ನೀವು ಸಾಮಾನ್ಯವಾಗಿ ಕಂಡುಬರುವ ಹಲವು ಅನಾರೋಗ್ಯ ತೊಂದರೆಗಳಿಂದ ದೂರವಿರಬಹುದು. ಅರಿಶಿನಕ್ಕೆ ಹಾಲನ್ನು ಸೇರಿಸಿ ಬಳಸುವುದರಿಂದ ಹಲವಾರು ಆರೋಗ್ಯ ಸಮಸ್ಯೆಗೆ ಶಾಶ್ವತ ಪರಿಹಾರ ದೊರಕುತ್ತದೆ. ಇವು ಪರಿಸರದ ಅಪಾಯಕಾರಿ ಜೀವಾಣುಗಳ ವಿರುದ್ಧ ಹೋರಾಡಲು ಅತ್ಯಂತ ಸಹಾಯಕಾರಿ.

ಅರಿಶಿನ ಮತ್ತು ಹಾಲಿನ ರೆಸಿಪಿ / ಉಪಯೋಗ ಒಂದು ಇಂಚಿನ ಅರಿಶಿನ ಬೇರು/ಅರಿಶಿನ ಕೊಂಬನ್ನು ತೆಗೆದುಕೊಳ್ಳಿ. ಇದನ್ನು ಹಾಲಿನಲ್ಲಿ 15 ನಿಮಿಷಗಳ ಕಾಲ ಕುದಿಸಿ. ನಂತರ ಅರಿಶಿನ ತುಂಡನ್ನು ತೆಗೆದು ಹಾಲನ್ನು ತಣಿಸಿ ಕುಡಿಯಿರಿ. ಈ ಅದ್ಭುತ ನೈಸರ್ಗಿಕ ಕೊಡುಗೆಯಿಂದ ಉಂಟಾಗುವ 15 ಕ್ಕೂ ಹೆಚ್ಚಿನ ಉಪಯೋಗಗಳನ್ನು ನೋಡೋಣ:

ಅರಿಶಿನ ಹಾಲಿನ ಉಪಯೋಗಗಳುಉಸಿರಾಟದ ತೊಂದರೆ
ಅರಿಶಿನ ಹಾಲು ಬ್ಯಾಕ್ಟೀರಿಯಾದ ಸೋಂಕುಗಳು ಮತ್ತು ವೈರಸ್ ಸೋಂಕುಗಳು ಆಕ್ರಮಿಸುವುದನ್ನು ವಿರೋಧಿಸುತ್ತದೆ. ಇದು ಉಸಿರಾಟದ ಸಂಬಂಧಿ ತೊಂದರೆಗಳನ್ನು ನಿವಾರಿಸುತ್ತದೆ. ನಿಮ್ಮ ದೇಹ ಉಷ್ಣವಾಗಿದ್ದರೆ ಮತ್ತು ಉಸಿರಾಟ ಹಾಗೂ ಸೈನೆನ್ ಸಮಸ್ಯೆಗಳನ್ನು ಇದು ಹೋಗಲಾಡಿಸುತ್ತದೆ. ಅಲ್ಲದೇ ಅಸ್ತಮಾ ಹಾಗೂ ಗಂಟಲೂತದಿಂದ ಕೂಡ ನಿವಾರಣೆ ಹೊಂದಬಹುದು.

ಕ್ಯಾನ್ಸರ್
ಈ ಅರಿಶಿನ ಹಾಲು, ಉರಿಯೂತ ವಿರೋಧಿ ಗುಣಲಕ್ಷಣಗಳನ್ನು ಹೊಂದಿರುವುದರಿಂದ ಸ್ತನ, ಚರ್ಮ, ಶ್ವಾಸಕೋಶ, ಪ್ರಾಸ್ಟೇಟ್ ಮತ್ತು ಗುದನಾಳದ ಕ್ಯಾನ್ಸರ್ ನಂತಹ ಬೆಳವಣಿಯನ್ನು ತಡೆಯುತ್ತದೆ. ಇದು ಹಾನಿಕಾರಕ ಡಿಎನ್ಎಯ ಕ್ಯಾನ್ಸರ್ ಜೀವಕೋಶಗಳನ್ನು ತಡೆಯುತ್ತದೆ ಮತ್ತು ಚಿಕಿತ್ಸೆಯ ಅಡ್ಡ ಪರಿಣಾಮಗಳನ್ನು ಕಡಿಮೆ ಮಾಡುತ್ತದೆ.

ನಿದ್ರಾಹೀನತೆ
ಬಿಸಿ ಅರಿಶಿನ ಹಾಲು ಅಮೈನೊ ಆಮ್ಲ, ಟ್ರಿಪ್ಟೊಫಾನ್ ನ್ನು ಉತ್ಪಾದಿಸುತ್ತದೆ ಇದು ಶಾಂತಿಯುತ ಮತ್ತು ಸುಖ ನಿದ್ರೆಗೆ ಕಾರಣವಾಗುತ್ತದೆ.

ಶೀತ ಮತ್ತು ಕೆಮ್ಮು
ಅರಿಶಿನ ಹಾಲು ವೈರಸ್ ವಿರೋದಿ ಮತ್ತು ಬ್ಯಾಕ್ಟೀರಿಯ ನಿರೋಧಕ ಗುಣಗಳನ್ನು ಹೊಂದಿರುವ ಕಾರಣ, ಕೆಮ್ಮು ಮತ್ತು ಶೀತಕ್ಕೆ ಒಂದು ಉತ್ತಮ ಪರಿಹಾರ ಎಂದು ಪರಿಗಣಿಸಲಾಗಿದೆ. ಇದು ನೋಯುತ್ತಿರುವ ಗಂಟಲು, ಕೆಮ್ಮು ಮತ್ತು ಶೀತಕ್ಕೆ ತ್ವರಿತ ಪರಿಹಾರ ನೀಡುತ್ತದೆ.

ಸಂಧಿವಾತ
ಅರಿಶಿನ ಹಾಲು, ಸಂಧಿವಾತವನ್ನು ಹೋಗಲಾಡಿಸಲು ಮತ್ತು ಸಂಧಿವಾತಕ್ಕೆ ಕಾರಣವಾದ ಊತವನ್ನು ನಿವಾರಿಸಲು ಸಹಾಯಮಾಡುತ್ತದೆ. ಕೀಲು ಮತ್ತು ಸ್ನಾಯುಗಳಲ್ಲಿನ ನೋವುಗಳನ್ನೂ ಸಹ ನಿವಾರಿಸುವಲ್ಲಿ ಸಹಕಾರಿಯಾಗಿದೆ.

ನೋವು ಮತ್ತು ವೇದನೆ
ಅರಿಶಿನ ಹಾಲಿನಲ್ಲಿ ಸಕಲ ನೋವುಗಳನ್ನು ನಿವಾರಿಸಬಲ್ಲ ಶಕ್ತಿಯಿದೆ. ಇದು ದೇಹದಲ್ಲಿ ಬೆನ್ನುಮೂಳೆಯ ಮತ್ತು ಕೀಲುಗಳ ಬಲಪಡಿಸಲು ಮಾಡಬಹುದು .

ಉತ್ಕರ್ಷಣ ನಿರೋಧಕ
ಅರಿಶಿನ ಹಾಲು ಫ್ರೀ ರಾಡಿಕಲ್ ವಿರುದ್ಧ ಹೋರಾಡುವ ಉತ್ಕರ್ಷಣ ನಿರೋಧಕಗಳ ಅತ್ಯುತ್ತಮ ಮೂಲವಾಗಿದೆ. ಇದರಿಂದ ಅನೇಕ ಕಾಯಿಲೆಗಳನ್ನು ಗುಣಪಡಿಸಬಹುದು.

ರಕ್ತ ಶುದ್ಧೀಕರಣ
ಅರಿಶಿನ ಹಾಲು, ಆಯುರ್ವೇದ ಸಂಪ್ರದಾಯದಲ್ಲಿ ಅತ್ಯುತ್ತಮ ರಕ್ತ ಶುದ್ದೀಕರಣ/ ಕ್ಲಿನ್ಸರ್ ಎಂದು ಪರಿಗಣಿಸಲಾಗುತ್ತದೆ . ಇದು ದೇಹದಲ್ಲಿ ರಕ್ತ ಪರಿಚಲನೆಯ ಪುನಶ್ಚೇತನಗೊಳಿಸಲು ಮತ್ತು ವರ್ಧಿಸಲು ಸಹಾಯ ಮಾಡಬಹುದು. ಇದು ದುಗ್ಧನಾಳ ವ್ಯವಸ್ಥೆ ಮತ್ತು ಎಲ್ಲಾ ರಕ್ತನಾಳಗಳು ಶುದ್ಧೀಕರಿಸಲು ಕೂಡ ಅತ್ಯವಶ್ಯಕ.

ಲಿವರ್ ಕ್ರಿಯೆಗೆ ಸಹಾಯ
ಅರಿಶಿನ ಹಾಲು ಪಿತ್ತಜನಕಾಂಗದ ಕ್ರಿಯೆಯನ್ನು ಹೆಚ್ಚಿಸುತ್ತದೆ ಮತ್ತು ರಕ್ತ ಶುದ್ಧೀಕರಣ ಮಾಡುವ ಲಿವರ್ ನ್ನು ಬೆಂಬಲಿಸುತ್ತದೆ ಮತ್ತು ದುಗ್ಧನಾಳ ವ್ಯವಸ್ಥೆ ಶುದ್ಧೀಕರಿಸುತ್ತದೆ.

ಮೂಳೆಗಳ ಆರೋಗ್ಯ
ಅರಿಶಿನ ಹಾಲು, ಮೂಳೆಗಳು ಆರೋಗ್ಯಕರ ಮತ್ತು ಬಲವಾಗಿ ಇರಿಸಿಕೊಳ್ಳಲು ಸಹಾಯ ಮಾಡುವ ಕ್ಯಾಲ್ಸಿಯಂನ ಒಂದು ಉತ್ತಮ ಮೂಲವಾಗಿದೆ. ಭಾರತದ ಕ್ರಿಕೆಟ್ ದಂತಕಥೆಯಾದ ಸಚಿನ್ ತೆಂಡೂಲ್ಕರ್, ಉತ್ತಮ ಮೂಳೆ ಆರೋಗ್ಯಕ್ಕೆ ಅರಿಶಿನ ಹಾಲನ್ನೇ ದಿನವೂ ಕುಡಿಯುತ್ತಾನೆ. ಅರಿಶಿನ ಹಾಲು ಮೂಳೆ ಸವೆತ ಮತ್ತು ಸಂಧಿವಾತ ಕಡಿಮೆ ಮಾಡುತ್ತದೆ.

ಜೀರ್ಣಕ್ರಿಯೆ
ಇದು ಕರುಳಿನ ಆರೋಗ್ಯವನ್ನು ಉತ್ತೇಜಿಸುತ್ತದೆ ಮತ್ತು ಹೊಟ್ಟೆಯ ಹುಣ್ಣುಗಳು ಮತ್ತು ಕೊಲೈಟಿಸ್ ನ್ನು ಕಡಿಮೆಗೊಳಿಸುತ್ತದೆ. ಇದು ಒಂದು ಪ್ರಬಲ ನಂಜುನಿರೋಧಕವೂ ಆಗಿದೆ . ಇದು ಉತ್ತಮ ಜೀರ್ಣಕಾರಿ ಶಕ್ತಿ ಹೊಂದಿದ್ದು, ಹುಣ್ಣುಗಳು, ಅತಿಸಾರ ಮತ್ತು ಅಜೀರ್ಣವನ್ನು ತಡೆಯುತ್ತದೆ.

ಮುಟ್ಟಿನ ಸೆಳೆತ
ಇದು ಮುಟ್ಟಿನ ಸೆಳೆತ ಮತ್ತು ನೋವು ಸರಾಗಗೊಳಿಸುವ ಆಂಟಿಸ್ಪಾಸ್ಮೊಡಿಕ್ ನ್ನು ಹೊಂದಿರುವ ಅರಿಶಿನ ಹಾಲು ಅದ್ಭುತ ಶಕ್ತಿಯನ್ನು ಹೊಂದಿದೆ. ಗರ್ಭಿಣಿ ಮಹಿಳೆಯರ ಸುಲಭ ಹೆರಿಗೆಗೆ ಅರಿಶಿನ ಹಾಲು ಸೇವಿಸುವುದು ಅತ್ಯಂತ ಒಳ್ಳೆಯದು. ಅಂಡಾಶಯದ ವೇಗವಾದ ಸಂಕೋಚನಕ್ಕೆ ಅರಿಶಿನ ಹಾಲನ್ನು ಸೇವಿಸಬಹುದು.

ಗುಳ್ಳೆಗಳು ಮತ್ತು ಚರ್ಮ ಕೆಂಪಾಗುವುದು
ಕ್ಲಿಯೋಪಾತ್ರ, ಮೃದು ಮತ್ತು ಹೊಳೆಯುವ ಚರ್ಮಕ್ಕಾಗಿ ಅರಿಶಿನ ಹಾಲಿನ ಸ್ನಾನವನ್ನೇ ಮಾಡುತ್ತಿದ್ದರು ಎನ್ನಲಾಗುತ್ತದೆ.

 ಹೊಳೆಯುವ ಚರ್ಮಕ್ಕಾಗಿ ಅರಿಶಿನ ಹಾಲನ್ನು ಕುಡಿಯುವುದು ಒಳಿತು. ಹತ್ತಿಯಲ್ಲಿ ಅರಿಶಿನ ಹಾಲನ್ನು ನೆನೆಸಿ ಚರ್ಮ ಕೆಂಪಾಗಿರುವ ಜಾಗದಲ್ಲಿ ಅದ್ದಿ 15 ನಿಮಿಷಗಳ ಕಾಲ ಬಿಟ್ಟರೆ ಪೀಡಿತ ಪ್ರದೇಶವು ಬಹಳ ಬೇಗ ಗುಣವಾಗುತ್ತದೆ. ಇದು ಮೊದಲಿಗಿಂತ, ಚರ್ಮ ಹೆಚ್ಚು ಹೊಳೆಯುವಂತೆ ಮಾಡುತ್ತದೆ.

ತೂಕ ನಷ್ಟ (ತೂಕ ಕಡಿಮೆಯಾಗುವುದು)
ಅರಿಶಿನ ಹಾಲು ಆಹಾರದಲ್ಲಿರುವ ಕೊಬ್ಬಿನ ಅಂಶವನ್ನು ಸ್ಥಗಿತಗೊಳಿಸುತ್ತದೆ. ಈ ತೂಕವನ್ನು ನಿಯಂತ್ರಿಸಲು ಉಪಯೋಗಕಾರಿಯಾಗಿದೆ.

- ಸಂಗ್ರಹ ಲೇಖನ , ನಮ್ಮ ಓದುಗರು ನೀಡಿದ ಲೇಖನ



Gastric Home Remedy - ಗ್ಯಾಸ್ಟ್ರಿಕ್‌ ಮನೆಮದ್ದು

Gastric Home Remedy

ಏನೇನೋ ತಿಂದು ಹೊಟ್ಟೆಯಲ್ಲಿ ಗ್ಯಾಸ್‌ ತುಂಬಿ ಉಂಟಾಗುವ ಗ್ಯಾಸ್ಟ್ರಿಕ್‌ ಸಮಸ್ಯೆ ಈಗ ಹೆಚ್ಚಿನ ಎಲ್ಲಾ ವ್ಯಕ್ತಿಗಳನ್ನು ಕಾಡುವ ಸಾಮಾನ್ಯ ಸಮಸ್ಯೆಯಾಗಿದೆ. ತಿಂದದ್ದು ಸರಿಯಾಗಿ ಜೀರ್ಣವಾಗದೇ ಇರುವುದು ಗ್ಯಾಸ್ಟ್ರಿಕ್‌ ಸಮಸ್ಯೆಗೆ ಕಾರಣವಾಗಿರಬಹುದು. ಗ್ಯಾಸ್ಟ್ರಿಕ್‌ ಸಮಸ್ಯೆ ಪುರುಷರು ಮತ್ತು ಮಹಿಳೆಯರಲ್ಲೂ ಸಹ ಕಂಡುಬರುತ್ತದೆ.

ಈ ಗ್ಯಾಸ್ಟ್ರಿಕ್‌ ಸಮಸ್ಯೆಯಿಂದ ಮುಕ್ತಿ ಪಡೆಯಲು ಇಲ್ಲಿದೆ ಸುಲಭ ಉಪಾಯ...

ಸೋಂಪು ತಿನ್ನಿ : 
ಒಂದು ಚಮಚ ಸೋಂಪು ತಿನ್ನಿ ಅಥವಾ ಇದರ ಚಹಾ ಮಾಡಿ ಸೇವಿಸಿ. ಇದರಿಂದ ಒಂದು ನಿಮಿಷದಲ್ಲಿ ಗ್ಯಾಸ್ಟ್ರಿಕ್‌ ಕಡಿಮೆಯಾಗುತ್ತದೆ. 

ಒಣ ಶುಂಠಿ :
ಅರ್ಧ ಚಮಚ ಒಣ ಶುಂಠಿ ಪೌಡರ್‌ ಮತ್ತು ಒಂದು ಚಿಟಿಕೆ ಹಿಂಗುವಿಗೆ ಒಂದು ಕಪ್‌ ಬಿಸಿ ನೀರು ಮಿಕ್ಸ್‌ ಮಾಡಿ ಕುಡಿಯಿರಿ. 

ಪುದೀನಾ : 
ಒಂದು ಕಪ್‌ ಪುದೀನಾ ಚಾಹ ದಿನವೂ ಸೇವಿಸಿ. ಇದರಿಂದ ಹೊಟ್ಟೆನೋವು ಕಡಿಮೆಯಾಗಿ ಗ್ಯಾಸ್‌ ಸಮಸ್ಯೆ ನಿವಾರಣೆಯಾಗುತ್ತದೆ. 

ಕೊತ್ತಂಬರಿ ಸೊಪ್ಪು : 
ಗ್ರಾಸ್ಟ್ರಿಕ್‌ ಸಮಸ್ಯೆ ಉಂಟಾದರೆ ಕೊತ್ತಂಬರಿ ಸೊಪ್ಪು ಕಷಾಯ ಮಾಡಿ ಕುಡಿಯುವುದರಿಂದಲೂ ನಿವಾರಣೆಯಾಗುತ್ತದೆ. ಹೊಟ್ಟೆ ನೋವು ಸಹ ನಿವಾರಣೆಯಾಗುತ್ತದೆ. 

ತುಳಸಿ :
ತುಳಸಿ ಎಲೆಗಳನ್ನು ಹಾಗೇ ತಿನ್ನುವುದರಿಂದ ಸಹ ಗ್ಯಾಸ್‌ನಿಂದ ಶೀಘ್ರ ಮುಕ್ತಿ ದೊರೆಯುತ್ತದೆ. 

ಚೀನಿಕಾಯಿ : 
ಪ್ರತಿದಿನ ಊಟದ ಜೊತೆ ಒಂದು ಕಪ್‌ ಚೀನಿಕಾಯಿ ತಿನ್ನುವುದರಿಂದ ಗ್ಯಾಸ್ಟ್ರಿಕ್‌ನಿಂದ ಮುಕ್ತಿ ಸಿಗುತ್ತದೆ. ಯಾಕೆಂದರೆ ಇದರಲ್ಲಿ ವಿಟಾಮಿನ್‌ ಎ, ಪೊಟ್ಯಾಶಿಯಂ ಮತ್ತು ಫೈಬರ್‌ ಇರುತ್ತದೆ. 

ಮೊಸರು : 
ಇದರಲ್ಲಿ ಬಹುಪಯೋಗಿ ಬ್ಯಾಕ್ಟೀರಿಯಾ ಇರುತ್ತದೆ. ಇದರಿಂದ ಹೊಟ್ಟೆ ಯಾವಾಗಲೂ ಸರಿಯಾಗಿರುತ್ತದೆ. ತಿಂದದ್ದು ಸರಿಯಾಗಿ ಜೀರ್ಣವಾಗುತ್ತದೆ. 

ಲಿಂಬೆಹಣ್ಣು : 
ಬೆಳಗ್ಗೆ ಯಾವಾಗಲೂ ಒಂದು ಲೋಟ ನಿಂಬೆ ರಸವನ್ನು ಬಿಸಿನೀರಿನ ಜೊತೆ ಕುಡಿಯುವುದರಿಂದ ಗ್ರಾಸ್ಟ್ರಿಕ್‌ ಸಮಸ್ಯೆ ಉಂಟಾಗುವುದಿಲ್ಲ. 

ಮನೆ ಮದ್ದುಗಳು , Home remedies

ಮನೆ ಮದ್ದುಗಳು , Home remedies ವಸ್ತು : ಸೌತೆಕಾಯಿ
ಉಪಯೋಗ : ಜೀರ್ಣಶಕ್ತಿ ಹೆಚ್ಚಳ ಮತ್ತು ಉತ್ತಮ ನಿದ್ರೆ.
ಸೌತೆಕಾಯಿಯನ್ನು ಸಿಪ್ಪೆ ಸಹಿತ ಕತ್ತರಿಸಿ ಕಾಳುಮೆಣಸಿನ ಪುಡಿ ಮತ್ತು ಉಪ್ಪಿನೊಂದಿಗೆ ಸೇರಿಸಿಕೊಂಡು ತಿನ್ನುತ್ತಾ ಬಂದರೆ ಜೀರ್ಣಶಕ್ತಿ ಹೆಚ್ಚುವುದು. ಸೌತೆಕಾಯಿ ತಿರುಳಿನಿಂದ ಅಂಗಾಲು ಉಜ್ಜಿಕೊಂಡರೆ ಕಣ್ಣುಗಳ ಉರಿ ಶಾಂತವಾಗಿ ಚೆನ್ನಾಗಿ ನಿದ್ದೆ ಬರುತ್ತದೆ. ಮುಖದ ಚರ್ಮದ ಮೇಲೆ ಸೌತೆಕಾಯಿ ಚೂರುಗಳನ್ನು ತಿಕ್ಕಿದರೆ ಮುಖ ಕಾಂತಿಯುಕ್ತವಾಗುವುದು.

ವಸ್ತು : ಏಲಕ್ಕಿ
ಶಮನ : ಅಜೀರ್ಣದ ಸಮಸ್ಯೆಯಿಂದ ಬಳಲುತ್ತಿರುವವರು ಏಲಕ್ಕಿ ಸೇವಿಸಿದರೆ ಶಮನಗೊಳ್ಳುವುದು. ಏಲಕ್ಕಿ ಯಿಂದ ಆಹಾರ ಜೀರ್ಣವಾಗಿ ಬಾಯಿಗೆ ರುಚಿಯುಂಟಾಗುತ್ತದೆ. ಒಣಕೆಮ್ಮು ಕಾಣಿಸಿಕೊಂಡಾಗ ಏಲಕ್ಕಿ ಪುಡಿಗೆ ಸ್ವಲ್ಪ ಶುಂಠಿ ಪುಡಿಯನ್ನು ಸೇರಿಸಿ ಸೇವಿಸಿದರೆ ಪರಿಣಾಮ ಬೀರುವುದು. ಮೇಲಿಂದ ಮೇಲೆ ಭೇದಿಯಾಗುತ್ತಿದ್ದರೆ ಸ್ವಲ್ಪ ಏಲಕ್ಕಿಯನ್ನು ಬೆಣ್ಣೆಯೊಡನೆ ಅರೆದು ತಿನ್ನುವುದರಿಂದ ಭೇದಿ ಕಡಿಮೆಯಾಗುತ್ತದೆ.

ವಸ್ತು : ಮೆಣಸು
ಶಮನ : ಅಜೀರ್ಣ, ಮೊಡವೆ, ಜಂತುಹುಳು.
ಮೆಣಸನ್ನು ಚೆನ್ನಾಗಿ ಪುಡಿ ಮಾಡಿ ಶುಂಠಿಯ ರಸದೊಡನೆ ಸೇವಿಸುವುದರಿಂದ ಅಜೀರ್ಣವು ನಿವಾರಣೆಯಾಗುತ್ತದೆ. ಕೆಲವು ಮೆಣಸಿನ ಕಾಳುಗಳನ್ನು ನೀರಿನಲ್ಲಿ ತೇಯ್ದು ಮೊಡವೆಗಳಿರುವ ಜಾಗಕ್ಕೆ ಹಚ್ಚಿದರೆ ವಾಸಿಯಾಗುತ್ತವೆ. ಹೊಟ್ಟೆಯಲ್ಲಿ ಜಂತುಹುಳುಗಳ ಉಪಟಳ ಜಾಸ್ತಿಯಾದಾಗ ಬೆಳಗ್ಗೆ ಮತ್ತು ರಾತ್ರಿ ಮೆಣಸಿನ ಕಷಾಯವನ್ನು ಕುಡಿಯುವುದು ಪರಿಣಾಮಕಾರಿ.

ವಸ್ತು : ಈರುಳ್ಳಿ
ಶಮನ : ರಕ್ತಹೀನತೆ, ಗಾಯದ ನೋವು, ರಕ್ತಸ್ರಾವ.
ಊಟದ ಜತೆ ಹಲವು ದಿನಗಳವರೆಗೆ ಪ್ರತಿನಿತ್ಯ ಹಸಿ ಈರುಳ್ಳಿಯನ್ನು ತಿನ್ನುವುದರಿಂದ ರಕ್ತಹೀನತೆ ವಾಸಿಯಾಗುತ್ತದೆ. ಪಟಾಕಿ ಸಿಡಿದು ಉಂಟಾದ ಗಾಯಗಳಿಗೆ ಈರುಳ್ಳಿಯನ್ನು ಜಜ್ಜಿ ಕಟ್ಟುವುದರಿಂದ ನೋವು ಕಡಿಮೆಯಾಗುತ್ತದೆ. ಮೂಗಿನಿಂದ ಆಗಾಗ್ಗೆ ರಕ್ತ ಒಸರುತ್ತಿದ್ದರೆ, ಮೂಗಿಗೆ ಒಂದೆರಡು ತೊಟ್ಟು ಈರುಳ್ಳಿ ರಸವನ್ನು ಹಾಕುವುದರಿಂದ ರಕ್ತ ಒಸರುವುದು ನಿಲ್ಲುವುದು.

ವಸ್ತು : ಕಡಲೆಕಾಳು
ಉಪಯೋಗ : ತೂಕ ಹೆಚ್ಚಳ, ಬಿಕ್ಕಳಿಕೆಗೆ ಕಡಿವಾಣ.
ಕಡಲೇಬೇಳೆಯನ್ನು ಚೆನ್ನಾಗಿ ಬೇಯಿಸಿ ಬೆಲ್ಲದೊಡನೆ ರುಬ್ಬಿ ತಯಾರಿಸಿದ ಹೂರಣವನ್ನು ಮಿತ ಪ್ರಮಾಣದಲ್ಲಿ ಹಲವು ದಿವಸ ತಿಂದರೆ ಶರೀರದ ತೂಕವು ಹೆಚ್ಚಾಗುವುದು. ಹುರಿದ ಕಡಲೆಯ ಹಿಟ್ಟನ್ನು ಕೆಂಡದ ಮೇಲೆ ಹಾಕಿ ಬಂದ ಹೊಗೆಯನ್ನು ಕುಡಿಯುವುದರಿಂದ ಬಿಕ್ಕಳಿಕೆ ನಿಲ್ಲುತ್ತದೆ.

ವಸ್ತು : ಹಲಸಿನ ಹಣ್ಣು
ಶಮನ : ತಲೆನೋವು, ನಿತ್ರಾಣ
ಸಾಮಾನ್ಯ ತಲೆನೋವು ಇರುವಾಗ, ಸ್ವಲ್ಪ ತುಪ್ಪದೊಡನೆ ಬೆಲ್ಲ ಸೇರಿಸಿ ಸೇವಿಸುವುದರಿಂದ ತಲೆನೋವು ಕಡಿಮೆಯಾಗುತ್ತದೆ. ಗರ್ಭಿಣಿಯರಿಗೆ ಮತ್ತು ಇತರರಿಗೆ ಆಗಾಗ್ಗೆ ನಿತ್ರಾಣವೆನಿಸಿದಾಗ ಬಿಸಿ ಹಾಲಿನ ಜೊತೆ ಸ್ವಲ್ಪ ಬೆಲ್ಲ ಸೇರಿಸಿ ಕುಡಿಯುವುದರಿಂದ ಚೈತನ್ಯ ಮೂಡುವುದು.

ವಸ್ತು : ಶುಂಠಿ
ಶಮನ : ಗಂಟಲು ಕಟ್ಟುವಿಕೆ, ಬಾಯಿ ವಾಸನೆ
ಶೀತ ಅಥವಾ ಇನ್ನಾವುದೇ ತೊಂದರೆಗಳಿಂದ ಗಂಟಲು ಕಟ್ಟಿ ಸರಿಯಾಗಿ ಮಾತನಾಡಲು ತೊಂದರೆಯಾದರೆ, ಹಸಿಶುಂಠಿ, ಲವಂಗ ಮತ್ತು ಸ್ವಲ್ಪ ಅಡುಗೆ ಉಪ್ಪು ಸೇರಿಸಿ ಬಾಯಿಗೆ ಹಾಕಿಕೊಂಡು ಚಪ್ಪರಿಸಿದರೆ ಗಂಟಲು ಕಟ್ಟುವುದು ನಿವಾರಣೆಯಾಗುತ್ತದೆ. ಶುಂಠಿ ಸುಟ್ಟು ಬೂದಿ ಮಾಡಿಟ್ಟುಕೊಂಡು ಅದಕ್ಕೆ ಸ್ವಲ್ಪ ಉಪ್ಪು ಬೆರೆಸಿ ಹಲ್ಲುಜ್ಜುವುದರಿಂದ ಬಾಯಿ ವಾಸನೆ ಕಡಿಮೆಯಾಗುತ್ತದೆ.

ವಸ್ತು : ಮೆಂತ್ಯಸೊಪ್ಪು
ಶಮನ : ಸಕ್ಕರೆ ಕಾಯಿಲೆ
ಸಕ್ಕರೆ ರೋಗ ನಿಯಂತ್ರಣದಲ್ಲಿ ಮೆಂತ್ಯಸೊಪ್ಪು ಸಹಕಾರಿ.
ಸಕ್ಕರೆ ಕಾಯಿಲೆ ಕಾಣಿಸಿಕೊಂಡ ಆರಂಭದಲ್ಲಿಯೇ ಪ್ರತಿದಿವಸ ಬೆಳಿಗ್ಗೆ ಮೆಣ್ತ್ಯಸೊಪ್ಪಿನ ರಸವನ್ನು ಕುಡಿಯುತ್ತಾ ಬಂದರೆ ಪರಿಣಾಮ ಬೀರುವುದು. ಮೆಂತ್ಯಸೊಪ್ಪಿನಂತೆಯೇ ಮೆಂತ್ಯ ಕೂಡ ಔಷಧೀಯ ಗುಣಗಳನ್ನು ಹೊಂದಿದೆ.

ವಸ್ತು : ಎಳ್ಳು
ಶಮನ : ಸುಟ್ಟ ಗಾಯ, ಉರಿಮೂತ್ರ
ಸುಟ್ಟಗಾಯಕ್ಕೆ ಎಳ್ಳೆಣ್ಣೆ ಹಚ್ಚುವುದರಿಂದ ಗಾಯ ಬೇಗ ವಾಸಿಯಾಗುತ್ತದೆ. ಎಳ್ಳು ಮತ್ತು ಸೌತೆಬೀಜವನ್ನು ಅರೆದು ಹಾಲು, ತುಪ್ಪದೊಡನೆ ಸೇರಿಸಿ ಕುಡಿಯುವುದರಿಂದ ಎಲ್ಲ ರೀತಿಯ ಕಟ್ಟು ಮೂತ್ರ ಮತ್ತು ಉರಿಮೂತ್ರ ಗುಣವಾಗುತ್ತದೆ.

ಸಾಸಿವೆ(ಮಸ್ಟರ್ಡ್)
ಶಮನ : ಹಲ್ಲು ನೋವು, ಉಪ್ಪಿನಕಾಯಿ ಶಿಲೀಂದ್ರ
ಹಲ್ಲು ನೋವಿರುವವರು ಸ್ವಲ್ಪ ಸಾಸಿವೆ ಕಾಳನ್ನು ಅಗಿದು ಸ್ವಲ್ಪ ಹೊತ್ತಿನ ನಂತರ ಉಗಿಯಬೇಕು. ಇದರಿಂದ ಹಲ್ಲುನೋವು ನಿವಾರಣೆಯಾಗುತ್ತದೆ. ಜತೆಗೆ ಹಸಿವನ್ನೂ ಹೆಚ್ಚಿಸುತ್ತದೆ. ಉಪ್ಪಿನಕಾಯಿಯಲ್ಲಿ ಸಾಸಿವೆಯನ್ನು ಸ್ವಲ್ಪ ಹೆಚ್ಚು ಬಳಸಿದರೆ, ಬೇಗ ಕೆಡುವುದಿಲ್ಲ. ಸಾಮಾನ್ಯವಾಗಿ ಉಪ್ಪಿನಕಾಯಿ ಹಾಳಾಗಲು ಆಸ್ಟರ್ಜಲಿನ್ ಎಂಬ ಶಿಲೀಂದ್ರ ಕಾರಣವಾಗಿದ್ದು, ಇದು ಬೆಳೆಯುವುದನ್ನು ಸಾಸಿವೆ ತಡೆಯುತ್ತದೆ.

ವಸ್ತು : ಗೋಧಿ
ಶಮನ : ಹೊಟ್ಟೆ ಹುಣ್ಣು, ಕೀಲುನೋವು
ಗೋಧಿ ಹಿಟ್ಟಿನಲ್ಲಿ ಚಪಾತಿ ಮಾಡಿ ತಿನ್ನುವುದರಿಂದ ಹೊಟ್ಟೆಯಹುಣ್ಣು ನಿವಾರಣೆಯಾಗುವುದು. ಜತೆಗೆ ಹಲ್ಲು ಮತ್ತು ವಸಡುಗಳಿಗೆ ಶಕ್ತಿ ಬರುವುದು. ಗೋಧಿ ಹಿಟ್ಟಿನ ತಂಬಿಟ್ಟು ಮಾಡಿಕೊಂಡು ತಿಂದರೆ ಕೀಲು ಮತ್ತು ಎಲುಬು ನೋವು ಶಮನಗೊಳ್ಳುವುದು.

ವಸ್ತು : ಶುಂಠಿ
ಶಮನ : ಅಜೀರ್ಣ, ನೆಗಡಿ, ಹಲ್ಲುನೋವು.
ಊಟ ಮಾಡುವುದಕ್ಕೆ ಮೊದಲು ಅವರೆಕಾಳಿನಷ್ಟು ಹಸಿಶುಂಠಿಯನ್ನು ನಾಲ್ಕು ಹರಳು ಉಪ್ಪು ಸಹಿತ ಅಗಿದು ತಿಂದರೆ ಅಜೀರ್ಣದ ಸಮಸ್ಯೆ ಇಲ್ಲವಾಗುವುದು. ಹಸಿಶುಂಠಿಯ ಕಷಾಯಕ್ಕೆ ಸಕ್ಕರೆ ಬೆರೆಸಿ ದಿನಕ್ಕೆ ಮೂರು ಬಾರಿ ಸೇವಿಸಿದರೆ ನೆಗಡಿ ನಿವಾರಣೆಯಾಗುವುದು. ಒಣಶುಂಠಿಯನ್ನು ಕೆಂಡದ ಮೇಲೆ ಸುಟ್ಟು ಪುಡಿ ಮಾಡಿ ಅದಕ್ಕೆ ಉಪ್ಪಿನ ಪುಡಿ ಬೆರೆಸಿ ಹಲ್ಲು ತಿಕ್ಕಿದರೆ ಹಲ್ಲು ನೋವು ಶಮನವಾಗುವುದು.

ವಸ್ತು : ಜೇನುತುಪ್ಪ
ಶಮನ : ಸುಟ್ಟ ಗಾಯ, ಚರ್ಮರೋಗ.
ಸುಟ್ಟ ಗಾಯಕ್ಕೆ ತಕ್ಷಣ ಜೇನುತುಪ್ಪ ಹಚ್ಚುವುದರಿಂದ ಉರಿ ಶಮನವಾಗಿ ಗಾಯ ಶೀಘ್ರ ಮಾಗುತ್ತದೆ. ಹುಳುಕಡ್ಡಿ, ಇಸಬು ಮುಂತಾದ ಚರ್ಮರೋಗಗಳಿಗೆ ಮತ್ತು ಹುಣ್ಣುಗಳ ಮೇಲೆ ಜೇನುತುಪ್ಪ ಸವರುವುದರಿಂದ ಗುಣವಾಗುವುದು.

ವಸ್ತು : ಕಡಲೇ ಕಾಳು
ಶಮನ : ನಿಶ್ಯಕ್ತಿ, ನೆಗಡಿ
ನಿಶ್ಯಕ್ತಿಯಿಂದ ಬಳಲುವವರು, ಹೆಚ್ಚು ವ್ಯಾಯಾಮ ಮಾಡುವವರು ಎರಡು ಮೂರು ಚಮಚದಷ್ಟು ಕಡಲೇ ಕಾಳನ್ನು ತಣ್ಣೀರಿನಲ್ಲಿ ರಾತ್ರಿ ನೆನೆಸಿಟ್ಟು ಬೆಳಗ್ಗೆ ಒಣದ್ರಾಕ್ಷಿಯ ಜತೆ ಅಗಿದು ಸೇವಿಸಿ ನಂತರ ಹಾಲು ಕುಡಿದರೆ ನಿಶ್ಯಕ್ತಿ ಕಡಿಮೆಯಾಗುವುದು. ನೆಗಡಿಯಿರುವವರು ಬಿಸಿಯಾದ ಕಡಲೆಯನ್ನು ತಿನ್ನುವುದರಿಂದ ಶೀತ ಕಡಿಮೆಯಾಗುತ್ತದೆ.

ವಸ್ತು : ಹಲಸಿನ ಹಣ್ಣು
(ಜ್ಯಾಕ್ ಫ್ರೂಟ್)
ಶಮನ : ಪಿತ್ತ ವಿಕಾರ, ನರಗಳ ದೌರ್ಬಲ್ಯ.
ಹಲಸಿನ ಹಣ್ಣನ್ನು ಜೇನುತುಪ್ಪದೊಡನೆ ತಿನ್ನುತ್ತಾ ಬಂದರೆ ಪಿತ್ತವಿಕಾರಗಳು ಶಮನಗೊಳ್ಳುವುದು. ತೊಳೆಗಳನ್ನು ಸಣ್ಣದಾಗಿ ತುಂಡುಮಾಡಿ ಬಾಳೆಹಣ್ಣು, ಜೇನುತುಪ್ಪದೊಡನೆ ಸೇವಿಸಿದರೆ ದೈಹಿಕ ಶಕ್ತಿ ಹೆಚ್ಚುವುದಲ್ಲದೇ ನರಗಳ ದೌರ್ಬಲ್ಯ ಕಡಿಮೆಯಾಗುತ್ತದೆ. ಹಲಸಿನ ಸೇವನೆಯಿಂದ ವೀರ್ಯ್ ವೃದ್ಧಿಯೂ ಆಗುತ್ತದೆ. ಅತಿಯಾಗಿ ತಿಂದರೆ ಹೊಟ್ಟೆನೋವು ಬರುವ ಸಾಧ್ಯತೆ ಇದೆ.

ವಸ್ತು : ಸೀತಾಫಲ (ಕಸ್ಟರ್ಡ್ ಆಪಲ್)
ಉಪಯೋಗ : ಜೀರ್ಣಶಕ್ತಿ ಹೆಚ್ಚಳ, ರಕ್ತವೃದ್ಧಿ.
ಪ್ರತಿದಿನ ಊಟದ ನಂತರ ಈ ಹಣ್ಣನ್ನು ಸೇವಿಸುವುದರಿಂದ ಜೀರ್ಣಶಕ್ತಿ ಹೆಚ್ಚುವುದು. ಇದು ತಂಪುಕಾರಕವಾಗಿದ್ದು ಸೇವನೆಯಿಂದ ರಕ್ತವೃದ್ಧಿಯಾಗುವುದರ ಜತೆಗೆ ಸ್ನಾಯುಗಳು ಬಲಗೊಳ್ಳುತ್ತವೆ. ವಾಂತಿ ಹಾಗೂ ಹೊಟ್ಟೆ ಉರಿ ಶಮನವಾಗುತ್ತದೆ. ಕುರುಗಳನ್ನು ಪಕ್ವಗೊಳಿಸಲು ಹಣ್ಣಿನ ತಿರುಳನ್ನು ಉಪ್ಪಿನ ಜತೆ ಬೆರೆಸಿ ಲೇಪಿಸಬೇಕು.

ವಸ್ತು : ಹಾಗಲಕಾಯಿ
(ಬಿಟ್ಟರ್ ಗೌರ್ಡ್)
ಶಮನ : ಮಧುಮೇಹ, ಕರುಳಿನ ಹುಣ್ಣು, ಮೂಲವ್ಯಾಧಿ.
ಮಧುಮೇಹದಿಂದ ನರಳುತ್ತಿರುವ ರೋಗಿಗಳು ಹಾಗಲಕಾಯಿಯನ್ನು ಹಸಿಯಾಗಿ ತಿಂದರೆ ರೋಗ ಉಲ್ಬಣಿಸದೆ ಬಹುಪಾಲು ಗುಣವಾಗುವುದು. ಹಾಗಲಕಾಯಿಯ ಗೊಜ್ಜು ಮಾಡಿಕೊಂಡು ಕ್ರಮವಾಗಿ ಸೇವಿಸುತ್ತಿದ್ದರೆ ರಕ್ತ ಶುದ್ಧಿಯಾಗುವುದು. ಕರುಳಿನ ಹುಣ್ಣು, ಮೂಲವ್ಯಾಧಿ ಹಾಗೂ ಕೆಮ್ಮು ನಿವಾರಣೆಯಾಗುವುದು.

ವಸ್ತು : ಅಂಜೂರ (ಫಿಗ್)
ಶಮನ : ಒತ್ತಡ, ಮಲಬದ್ಧತೆ, ಮೂಲವ್ಯಾಧಿ.
ಅಂಜೂರದ ಹಣ್ಣುಗಳ ಸೇವನೆಯಿಂದ ಅಧಿಕ ಕೆಲಸದಿಂದ ಉಂಟಾದ ದೈಹಿಕ ಮತ್ತು ಮಾನಸಿಕ ಒತ್ತಡ ನಿವಾರಣೆಯಾಗುವುದು. ನವ ಚೈತನ್ಯ ಮೂಡುವುದು. ಈ ಹಣ್ಣಿನಲ್ಲಿ ನಾರಿನಂಶವಿರುವುದರಿಂದ ಮಲಬದ್ಧತೆ ಶಮನವಾಗುವುದು. ಮೂಲವ್ಯಾಧಿಯಿಂದ ಬಳಲುವವರು ಮೂರು ಅಂಜೂರದ ಹಣ್ಣುಗಳನ್ನು ರಾತ್ರಿ ನೀರಿನಲ್ಲಿ ನೆನೆಸಿಟ್ಟು ಬೆಳಿಗ್ಗೆ ಎದ್ದ ಕೂಡಲೇ ಹಣ್ಣುಗಳನ್ನು ತಿಂದು ಆ ನೀರು ಕುಡಿದರೆ ಗುಣವಾಗುವುದು.

ವಸ್ತು ಸೇಬು (ಆಪಲ್)
ಶಮನ : ತಲೆನೋವು, ಮರೆವು, ಮೊಡವೆ.
ಸೇಬಿನ ಹಣ್ಣನ್ನು ತುಂಡುಮಾಡಿಕೊಂಡು ಉಪ್ಪು ಸಹಿತ ನಿರಂತರ ಸೇವಿಸಿದರೆ ತಲೆನೋವು ಕಡಿಮೆಯಾಗುವುದು. ಸೇಬಿನ ತಿರುಳನ್ನು ಅರೆದು ಮುಖಕ್ಕೆ ಲೇಪಿಸಿಕೊಂಡರೆ ಮೊಡವೆಗಳು ನಿವಾರಣೆಯಾಗಿ ಮುಖದ ಕಾಂತಿ ಹೆಚ್ಚುವುದು. ಊಟವಾದ ಬಳಿಕ ಸೇಬನ್ನು ತಿಂದರೆ ಜ್ನಾಪಕ ಶಕ್ತಿ ಹೆಚ್ಚುವುದು.

ವಸ್ತು : ಪರಂಗಿ ಹಣ್ಣು
(ಪಪಾಯ)
ಶಮನ : ಹೃದಯ ದೌರ್ಬಲ್ಯ
ಪರಂಗಿಹಣ್ಣಿನ ಜತೆ ಹಾಲು ಮತ್ತು ಜೇನುತುಪ್ಪ ಸೇರಿಸಿ ಸೇವಿಸುವುದರಿಂದ ಹೃದಯ ದೌರ್ಬಲ್ಯ ನಿವಾರಣೆಯಾಗಿ ಹೊಸ ಚೈತನ್ಯ ಮೂಡುವುದು. ಹಾಲುಣಿಸುವ ತಾಯಂದಿರು ಹಣ್ಣನ್ನು ನಿಯಮಿತವಾಗಿ ಬಳಸುವುದರಿಂದ ಶಕ್ತಿ ಹೆಚ್ಚುವುದು. ಊಟದ ನಂತರ ಹಣ್ಣನ್ನು ಸೇವಿಸುತ್ತಾ ಬಂದರೆ ಆಹಾರ ಚೆನ್ನಾಗಿ ಜೀರ್ಣವಾಗುವುದು.

ವಸ್ತು : ಕಡಲೇಕಾಯಿ
ಉಪಯೋಗ : ಮುಖದ ಕಾಂತಿ ಹೆಚ್ಚಳ, ಮಧುಮೇಹಿಗಳಿಗೆ ಅನುಕೂಲ.
ಒಂದು ಚಮಚ ಕಡಲೇಕಾಯಿ ಎಣ್ಣೆಗೆ ಅಷ್ಟೇ ಪ್ರಮಾಣದ ನಿಂಬೆ ರಸ ಬೆರೆಸಿ ರಾತ್ರಿ ಮುಖಕ್ಕೆ ಲೇಪಿಸುವುದರಿಂದ ಮುಖದ ಕಾಂತಿ ಹೆಚ್ಚುತ್ತದೆ. ಗೋಧಿ ಹಿಟ್ಟು ಹಾಗೂ ಶೇಂಗಾ ಹಿಟ್ಟು ಬೆರೆಸಿದ ರೊಟ್ಟಿಯು ಮಧುಮೇಹಿಗಳಿಗೆ ಹಿತ. ಶೇಂಗಾ ಹಿಂಡಿಯಲ್ಲಿ ಉತ್ತಮ ಸಸಾರಜನಕವಿದ್ದು, ದನಕರುಗಳಿಗೆ ಉತ್ತಮ.

ವಸ್ತು : ಮಾವು (ಮ್ಯಾಂಗೊ)
ಶಮನ : ಮೂಲವ್ಯಾಧಿ, ವಾತ-ಪಿತ್ತ, ಮಲಬದ್ಧತೆ, ಅಜೀರ್ಣ.
ಹುಣಸೆ ಚಿಗುರು ಮತ್ತು ಎಳೆ ಮಾವಿನಕಾಯಿಯನ್ನು ಬೇಯಿಸಿಕೊಂಡು ತಿಂದರೆ ಮೂಲವ್ಯಾಧಿ ಗುಣವಾಗುವುದು. ಹಣ್ಣನ್ನು ಹಿತಮಿತವಾಗಿ ತಿಂದರೆ ವಾಯು ಶಮನಗೊಳ್ಳುವುದು. ವಾತ-ಪಿತ್ತ ನಾಶಗೊಳಿಸಿ ಹೃದಯಕ್ಕೆ ಹಿತವಾಗುವುದು. ಉಪ್ಪು ಮತ್ತು ಜೇನುತುಪ್ಪವನ್ನು ನಂಚಿಕೊಂಡು ಮಾವಿನಕಾಯಿ ಹೀಚು ತಿಂದರೆ ಮಲಬದ್ಧತೆ ಮತ್ತು ಅಜೀರ್ಣ ನಿವಾರಣೆಯಾಗುವುದು.

ವಸ್ತು : ಅಡುಗೆ ಉಪ್ಪು
ಶಮನ : ಬಾಯಿ ಹುಣ್ನು
ಒಂದು ಬಟ್ಟಲು ಬಿಸಿನೀರಿನಲ್ಲಿ ಅರ್ಧ ಟೀ ಚಮಚ ಉಪ್ಪನ್ನು ಕರಗಿಸುವುದು. ನಂತರ ಈ ನೀರಿನಿಂದ ಬಾಯಿ ಮುಕ್ಕಳಿಸುವುದರಿಂದ ಬಾಯಿ ಹುಣ್ಣು ಶಮನವಾಗುವುದು.

ವಸ್ತು : ಮೆಣಸು
ಶಮನ : ಹಲ್ಲುನೋವು
ಮೆಣಸನ್ನು ನುಣ್ಣಗೆ ಅರೆದು ವಸಡಿಗೆ ಹಚ್ಚುವುದರಿಂದ ಕೆಟ್ಟ ನೀರು ಸುರಿದುಹೋಗಿ ನೋವು ಕಡಿಮೆಯಾಗುವುದು. ವಸಡಿಗೆ ನಿಂಬೆರಸ ಹಚ್ಚುವುದರಿಂದ ಹಲ್ಲುನೋವು ಶಮನವಾಗುವುದು.

ವಸ್ತು : ಕಿತ್ತಳೆ
ಶಮನ : ಮುಖದಲ್ಲಿ ಕಲೆ
ಕಿತ್ತಳೆ ಹಣ್ಣಿನ ಸಿಪ್ಪೆಯನ್ನು ಮುಖದಲ್ಲಿ ಕಲೆಯಿರುವ ಭಾಗದಲ್ಲಿ ಮೃದುವಾಗಿ ತಿಕ್ಕಬೇಕು. ಪ್ರತಿದಿನ ಹೀಗೆ ಮಾಡುತ್ತಿದ್ದರೆ ಮುಖದಲ್ಲಿನ ಮೊಡವೆಗಳು ಹಾಗೂ ಕಪ್ಪು ಕಲೆಗಳು ನಿವಾರಣೆಯಗುವುವು.

ವಸ್ತು : ಕೊತ್ತಂಬರಿ
ಶಮನ : ತಲೆನೋವು, ಬಾಯಿಯ ದುರ್ಗಂಧ.
ಕೊತ್ತಂಬರಿ ಸೊಪ್ಪಿನ ರಸವನ್ನು ಹಣೆಗೆ ಲೇಪ ಹಾಕುವುದರಿಂದ ತಲೆನೋವು ನಿವಾರಣೆಯಾಗುವುದು. ಬರೀ ಕೊತ್ತಂಬರಿಸೊಪ್ಪನ್ನು ಬಾಯಿಯಲ್ಲಿ ಜಗಿಯುವುದರಿಂದ ಬಾಯಿಯಿಂದ ದುರ್ಗಂಧ ಬರುವುದಿಲ್ಲ. ಜತೆಗೆ ದಂತ ಕ್ಷಯವೂ ನಿವಾರಣೆಯಾಗುತ್ತದೆ.

ವಸ್ತು : ಉದ್ದು
ಶಮನ : ವೀರ್ಯ ವೃದ್ಧಿಯಾಗಿ ಶಾರೀರಿಕ ಬಲ.
ಉದ್ದಿನ ಬೇಳೆಯನ್ನು ಹುರಿದು ಹಾಲಿನಲ್ಲಿ ಬೇಯಿಸಿ ಸಕ್ಕರೆ, ಏಲಕ್ಕಿ ಸೇರಿಸಿ ಪಾಯಸ ಮಾಡಿ ಸೇವಿಸುವುದರಿಂದ ವೀರ್ಯ ವೃದ್ಧಿಯಾಗಿ ಶಾರೀರಿಕ ಬಲ ಹೆಚ್ಚುವುದು. ಉದ್ದಿನ ಬೇಳೆ ತೊವ್ವೆಯನ್ನು ತಯಾರಿಸಿ ಊಟದ ಜತೆ ಸೇವಿಸಿದರೆ ಅಂಗಾಂಗಗಳು ಬಲಗೊಳ್ಳುವುವು.

ವಸ್ತು : ನಿಂಬೆ
ಶಮನ : ಸೊಳ್ಳೆಗಳ ಕಾಟ, ಬಾಯಿಯ ದುರ್ವಾಸನೆ.
ಸೊಳ್ಳೆಗಳು ಹೆಚ್ಚಾಗಿರುವ ಪ್ರದೇಶದಲ್ಲಿ ವಾಸಿಸುವ ಜನರು ಮೈಕೈಗೆ ನಿಂಬೆರಸ ಸವರಿಕೊಂಡರೆ ಸೊಳ್ಳೆಗಳು ಹತ್ತಿರ ಸುಳಿಯುವುದಿಲ್ಲ. ಬಾಯಿಯಿಂದ ದುರ್ವಾಸನೆ ಬರುತ್ತಿದ್ದರೆ ನಿಂಬೆರಸವನ್ನು ನೀರಿನಲ್ಲಿ ಬೆರೆಸಿ ಆಗಾಗ ಬಾಯಿ ಮುಕ್ಕಳಿಸುವುದರಿಂದ ನಿವಾರಣೆಯಾಗುವುದು.

ವಸ್ತು : ಲವಂಗ
ಶಮನ : ಹಲ್ಲು ನೋವು, ಕೆಮ್ಮು.
ಹಲ್ಲು ನೋವಿಗೆ ಲವಂಗದ ಎಣ್ಣೆ ಅಥವಾ ಲವಂಗದ ಮುಲಾಮನ್ನು ಹಚ್ಚುವುದರಿಂದ ನೋವು ನಿವಾರಣೆಯಾಗುತ್ತದೆ. ಸಾಧಾರಣ ಕೆಮ್ಮು ಕಾಣಿಸಿಕೊಂಡಾಗ ಕಲ್ಲುಸಕ್ಕರೆ ಮತ್ತು ಲವಂಗವನ್ನು ಬಾಯಿಗೆ ಹಾಕಿಕೊಂಡು ಜಗಿದು ರಸ ನುಂಗುವುದರಿಂದ ಶಮನವಾಗುವುದು.

ವಸ್ತು : ತುಳಸಿ
ಶಮನ : ಮೈಕೈನೋವು
ಒಂದು ಲೋಟ ನೀರಿನಲ್ಲಿ ಹತ್ತು ತುಲಸಿ ಎಲೆಗಳನ್ನು ಚೆನ್ನಾಗಿ ಕುದಿಸುವುದು. ನೀರು ಚೆನ್ನಾಗಿ ಕುದಿದು ಅರ್ಧ ಲೋಟ ಆದಮೇಲೆ ಸೋಸಿಕೊಳ್ಳುವುದು. ತಣ್ಣಗಾದ ಕಷಾಯಕ್ಕೆ ಉಪ್ಪನ್ನು ಹಾಕಿ ಕುಡಿಯುವುದು. ಮೈಕೈನೋವು ನಿಲ್ಲುವವರೆಗೂ ಪ್ರತಿದಿನ ಈ ಕಷಾಯ ಬಳಸುವುದು. ಜತೆಗೆ, ಅರ್ಧ ಗ್ರಾಂ ದಾಲ್ಚಿನ್ನಿ (ಚಕ್ಕೆ) ಪುಡಿಯನ್ನು ಒಂದು ಟೀ ಚಮಚ ಜೇನುತುಪ್ಪದೊಂದಿಗೆ ಕನಿಷ್ಟ ಪಕ್ಷ ದಿನಕ್ಕೆರಡು ಬಾರಿ ಸೇವಿಸಿದರೆ ನೋವು ಬೇಗ
ಶಮನವಾಗುವುದು.

ವಸ್ತು : ಮಾವಿನ ಎಲೆಗಳು
ಶಮನ : ಕಿವಿ ಸೋಂಕು
ಕೆಲವು ತಾಜಾ ಮಾವಿನ ಎಲೆಗಳನ್ನು ಚೆನ್ನಾಗಿ ಅರೆದು ಅವುಗಳಿಂದ ಒಂದು ಟೀ ಚಮಚ ರಸವನ್ನು ತಯಾರಿಸಿಕೊಳ್ಳುವುದು. ಈ ರಸವನ್ನು ಸ್ವಲ್ಪ ಬೆಚ್ಚಗೆ ಮಾಡಿ ಸೋಂಕಿಗೆ ಒಳಗಾಗಿರುವ ಕಿವಿಗೆ ಔಷಧವಾಗಿ ಬಳಸಬಹುದು. ದಿನಕ್ಕೆರಡು ಬಾರಿ ಪ್ರತಿಸಲವೂ ಒಂದೆರಡು ಹನಿ ಬಳಸಿದರೆ ಸೋಂಕು ನಿವಾರಣೆಯಾಗುವುದು.

ವಸ್ತು : ಖರ್ಜೂರ
ಶಮನ : ಜಂತುಹುಳು, ಭೇದಿ.
ಜಂತುಹುಳುಗಳಿಂದ ಬಳಲುತ್ತಿರುವವರು ಐದು ಖರ್ಜೂರ ತಿಂದು ನಿಂಬೆಹಣ್ಣಿನ ಪಾನೀಯ ಕುಡಿದರೆ ಶಮನವಾಗುವುದು. ಪರಿಣಾಮ ಬೀರುವವರೆಗೂ ಮುಂದುವರಿಸುವುದು ಒಳ್ಳೆಯದು. ಭೇದಿಯಾಗುತ್ತಿರುವಾಗ ಖರ್ಜೂರ ಸೇವಿಸಿದರೆ ನಿವಾರಣೆಯಾಗುವುದು.

ವಸ್ತು : ಉದ್ದು
ಶಮನ : ಸ್ತ್ರೀಯರ ಬಿಳುಪು ರೋಗ.
ಉದ್ದಿನ ಹಿಟ್ಟು, ಅತಿಮಧುರ, ಕುಂಬಳದ ಬೇರು ಹಾಗೂ ಅಶ್ವಗಂಧ, ಇವುಗಳನ್ನು ಸಮನಾಗಿ ಕುಟ್ಟಿ ಶೋಧಿಸಿಟ್ಟುಕೊಂಡು ಹಲವು ದಿನಗಳವರೆಗೆ ಬಿಡದೆ ಒಂದೊಂದು ಚಮಚದಂತೆ ಜೇನುತುಪ್ಪದೊಡನೆ ಸೇರಿಸಿ ದಿನಕ್ಕೆರಡು ಬಾರಿ ಸೇವಿಸುವುದರಿಂದ ಸ್ತ್ರೀಯರ ಬಿಳುಪುರೋಗ ವಾಸಿಯಾಗುತ್ತದೆ.

ವಸ್ತು : ಬಿಲ್ವ
ಶಮನ : ಕಫ, ಊತ.
ಕಫ ಕಟ್ಟಿಕೊಂಡು ಎದೆ ನೋವು ಬರುತ್ತಿದ್ದರೆ ಬಿಲ್ವದ ಎಲೆಗಳ ರಸವನ್ನು ಕುಡಿದರೆ ಶಮನವಾಗುವುದು. ಊತವಿರುವಾಗ ಎಲೆಗಳನ್ನು ಬಿಸಿ ಮಾಡಿ ಪಟ್ಟು ಹಾಕಿದರೆ ಪರಿಣಾಮ ಬೀರುವುದು.

ವಸ್ತು : ವೀಳ್ಯದೆಲೆ
ಶಮನ : ಕೆಮ್ಮು, ನೋವು.
ಒಂದು ವೀಳ್ಯದೆಲೆ, ಸ್ವಲ್ಪ ಕರೀ ತುಳಸಿ ಹಾಗೂ ಒಂದು ಲವಂಗವನ್ನು ಅರೆದು ದಿನಕ್ಕೆ ಎರಡು ಬಾರಿ ಸೇವಿಸಿದರೆ ಕೆಮ್ಮು ಕಡಿಮೆಯಾಗುವುದು. ವೀಳ್ಯದೆಲೆಗೆ ಹರಳೆಣ್ಣೆಯನ್ನು ಹಚ್ಚಿ ಅದನ್ನು ಬಿಸಿ ಮಾಡಿ ಹೊಟ್ಟೆ ಉಬ್ಬರದಿಂದ ನರಳುತ್ತಿರುವ ಮಗುವಿನ ಹೊಟ್ಟೆಗೆ ಕಾವು ಕೊಟ್ಟರೆ ನೋವು ಮಾಯವಾಗಿ ಮೂತ್ರ ಸುಲಭವಾಗಿ ಆಗುವುದು.

ವಸ್ತು : ಅರಿಶಿನ
ಶಮನ : ರಕ್ತ ಸ್ರಾವ, ಮೊಡವೆ.
ದೇಹದ ಯಾವುದೇ ಭಾಗ ಕೊಯ್ದುಕೊಂಡು ರಕ್ತ ಒಸರುತ್ತಿದ್ದರೆ, ಆ ಗಾಯದ ಮೇಲೆ ಅರಿಶಿನ ಹುಡಿಯನ್ನು ಉದುರಿಸಿದರೆ ರಕ್ತ ಬರುವುದು ನಿಲ್ಲುವುದು. ಮೊಡವೆಗಳಿಗೆ ಅರಿಶಿನದ ಕೊರಡನ್ನು ತೇಯ್ದು ಲೇಪಿಸುವುದರಿಂದ ಅವುಗಳು ಕ್ರಮೇಣ ಕಡಿಮೆಯಾಗುತ್ತವೆ.

ವಸ್ತು : ತುಳಸಿ
ಶಮನ : ಹುಳುಕಡ್ಡಿ.
ತುಳಸಿ ಗಿಡದ ಕಾಂಡದಿಂದ ಹುಳುಕಡ್ಡಿಯ ಭಾಗವನ್ನು ಚೆನ್ನಾಗಿ ಕೆರೆದು, ಅನಂತರ ತುಳಸಿ ಸೊಪ್ಪಿನ ಕಷಾಯದಿಂದ ಆ ಭಾಗವನ್ನು ಚೆನ್ನಾಗಿ ತೊಳೆಯಬೇಕು. ಇದಾದ ಮೇಲೆ ತುಳಸಿ ಸೊಪ್ಪನ್ನು ಚೆನ್ನಾಗಿ ಅರೆದು ಹುಳುಕಡ್ಡಿಯ ಮೇಲೆ ಲೇಪಿಸುವುದರಿಂದ ಶೀಘ್ರ ಗುಣ ಕಂಡುಬರುವುದು.

ವಸ್ತು : ಶ್ರೀಗಂಧ
ಶಮನ : ಚರ್ಮದ ಅಲರ್ಜಿ.
ಚರ್ಮದ ಅಲರ್ಜಿಯಿಂದ ಬಳಲುತ್ತಿರುವವರು ಶ್ರ್‍ಈಗಂಧವನ್ನು ಬಳಸಿದರೆ ಪರಿಣಾಮ ಬೀರುವುದು. ಒಂದು ಟೀ ಚಮಚ ನಿಂಬೇಹಣ್ಣಿನ ರಸದೊಂದಿಗೆ ಶ್ರ್‍ಈಗಂಧದ ಪುಡಿಯನ್ನು ಬೆರೆಸಿ ಅಲರ್ಜಿಯಿರುವ ಚರ್ಮದ ಮೇಲೆ ಲೇಪಿಸುತ್ತಾ ಬಂದರೆ ಗುಣವಾಗುವುದು.

ವಸ್ತು : ಪರಂಗಿಹಣ್ಣು
ಉಪಯೋಗ : ರೋಗ ನಿರೋಧಕ ಶಕ್ತಿ ಹೆಚ್ಚಳ, ಬೊಜ್ಜು ಕರಗುವಿಕೆ.
ಪ್ರತಿದಿನ ಪರಂಗಿಹಣ್ಣನ್ನು ಸೇವಿಸುವುದರಿಂದ ಶರೀರದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಅತಿಯಾದ ಬೊಜ್ಜಿನಿಂದ ಬಳಲುತ್ತಿರುವವರು ಹಣ್ಣು ಸೇವಿಸಿದರೆ ಪರಿಣಾಮ ಬೀರುವುದು. ಬಾಣಂತಿಯರು ಸೇವಿಸಿದರೆ ಹಾಲಿನ ಉತ್ಪತ್ತಿ ಹೆಚ್ಚುವುದು.

** We recommend , please consult your physician to get more details on the above and if it suits to your nature before practicing.

Tooth ache Gum problems - Home remedy

Tooth ache  or pain is one of the most annoying pains one may experience. With yummy foods in front of you and you are restricted not to eat because of tooth pain , you will be disappointed - isin't it. In this post we bring you out few tips on how to reduce tooth aches , what you may do when you are suffering with tooth pain & gum problems - and enjoy your favorite foods.





  • Cloves are very effective for tooth pain. The juice which comes out of cloves when placed at the pain spot relieves tooth pain.
  • Rinsing mouth with warm water mixed with salt - helps is maintaining jaws muscle strength.
  • During tooth ache , chewing mustard seeds for some time and spitting it later relieves pain
  • Applying a mix of lime & Asafoetida at the pain spot helps in reducing pain and bane to greater extent
  • Using a mixture of Betal leaves , little salt, cloves and Tulasi , chewing it and later spitting helps in reducing pain
  • Mixing salt with Dry ginger powder and brushing teeth helps in reducing pain
  • Applying lime paste to the area of Gum Bleeding , reduces the bleed.
  • Brushing teeth using dry lime powder not only helps in whitened teeth but also helps in reducing bad breath
  • Rinsing mouth with warm water which is soaked with Amla leaves helps in reducing tooth pain and Gum swelling.
  • Having tomato juice for 4-5 times a day helps in reducing Gums bleeding.
  • Using Orange peel , drying it and powder from it - when applied on tooth Gums ,helps in reducing gum bleeding.
  • Using Pomegranate peel - chewing it or soaking it in water and rinsing mouth - helps in reducing bad breath & mouth watering
  • Brushing teeth daily using Mango leaves prevents from tooth , gum diseases and provides strength
  • Using guava leaves dicoction and rinsing mouth helps in reducing tooth pain
  • Having apples by biting and chewing it without cutting it helps in good tooth and gum health
  • Using clove oil at the pain spot helps in relieving pain
  • With one pinch rock salt & camphor at the pain spot and chewing it - the water which gets released helps in reducing pain
  • Using the milk extracted from Papaya peel and applying to the pain spot helps in relieving pain
  • Using the mix of Garlic and Salt paste and applying to the pain spot relieves pain
  • Rinsing mouth using sesame oil helps in reducing moth diseases
  • Rinsing mouth from the warm water soaked with guava leaves & Pomegranate leaves aids in strengthening tooth muscles
  • Nilgiri oil helps in reducing tooth pain.

- An article by Durga. 

Disclaimer :  Always seek advice of your physician or qualified health professionals before taking any new treatment This information is not a substitute for professional medical advise.
Terms | Privacy | 2024 🇮🇳
–>